<p><strong>ಪೀಣ್ಯ ದಾಸರಹಳ್ಳಿ:</strong> ‘ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿ ಅವೈಜ್ಞಾನಿಕವಾಗಿದ್ದು, ಇದರ ವಿರುದ್ಧ ಮುಂದಿನ ವಾರ ಒಕ್ಕಲಿಗರ ಪ್ರಾಬಲ್ಯದ 16 ಜಿಲ್ಲೆಗಳಲ್ಲಿ ಹೋರಾಟ ಮಾಡಲಾಗುತ್ತದೆ’ ಎಂದು ಒಕ್ಕಲಿಗರ ಕ್ರಿಯಾ ಸಮಿತಿ ಸದಸ್ಯರು ತಿಳಿಸಿದರು.</p>.<p>‘ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ಕೈಗೊಳ್ಳಲಾಗುತ್ತಿದ್ದು, ಅದರಲ್ಲಿ ಎಸ್ಸಿ, ಎಸ್ಟಿ ಜನಗಣತಿಯನ್ನು ಪ್ರತ್ಯೇಕವಾಗಿ ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಎಸ್ಸಿ, ಎಸ್ಟಿ ಜನಾಂಗಕ್ಕೆ ಯಾವುದೇ ಉಪಯೋಗವಿಲ್ಲದಿದ್ದರೂ, ಉದ್ದೇಶಪೂರ್ವಕವಾಗಿ ಆ ಜನಾಂಗದ ನಾಯಕರನ್ನು ಮುನ್ನೆಲೆಗೆ ತಂದು ರಾಜ್ಯ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ’ ಎಂದು ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ.ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳನ್ನು ಕೈಗೊಂಡು ಒಂಬತ್ತು ವರ್ಷಗಳೇ ಕಳೆದಿವೆ. ಈ ಸಮೀಕ್ಷೆ ಪ್ರಕಾರ ಹಿಂದುಳಿದ ಆಯೋಗದಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಸಣ್ಣ ಪುಟ್ಟ ಜಾತಿಗಳಿಗೆ ಸೇರಿದವರನ್ನು ಮಾತ್ರ ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ಮಾಡಲಾಗಿದ್ದು ಎಸ್.ಸಿ, ಎಸ್.ಟಿ, ಮುಸ್ಲಿಂ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯವರನ್ನು ಹೊರಗಿಟ್ಟು ಸಂಚು ರೂಪಿಸಲಾಗಿದೆ’ ಎಂದು ದೂರಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಅಂದಾನಪ್ಪ ಮಾತನಾಡಿ, ‘2015ರಲ್ಲಿ ರಾಜ್ಯದಲ್ಲಿ 6.45 ಕೋಟಿ ಜನಸಂಖ್ಯೆ ಇತ್ತು. 2024ರ ವೇಳೆಗೆ 7.2 ಕೋಟಿಯಾಗಿದೆ. ರಾಜ್ಯ ಸರ್ಕಾರ ಜಾತಿ ಗಣತಿ ಮಾಡಿಸಿರುವುದು 5.98 ಕೋಟಿ ಜನಸಂಖ್ಯೆಗೆ ಮಾತ್ರವಾಗಿದ್ದು, ಇದು ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದರು.</p>.<p>ಇತಿಹಾಸ ಸಂಶೋಧಕ ತಲಕಾಡು ಚಿಕ್ಕರಂಗೇಗೌಡ ಮಾತನಾಡಿ, ‘ಈ ಸಮೀಕ್ಷೆ ಮಾಡಿರುವುದರ ಹಿಂದೆ ಲಿಂಗಾಯತ, ಒಕ್ಕಲಿಗರಿಗೆ ತೊಂದರೆ ಕೊಡುವ ವ್ಯವಸ್ಥಿತ ಸಂಚನ್ನು ಸರ್ಕಾರ ರೂಪಿಸಿದೆ’ ಎಂದರು.</p>.<p>ಒಕ್ಕಲಿಗ ಮುಖಂಡರಾದ ಬಿ.ಟಿ.ಶ್ರೀನಿವಾಸ್, ಎ.ಎಸ್. ಗೋವಿಂದೇಗೌಡ, ಕಾಳೇಗೌಡ, ಗೋವಿಂದರಾಜು ಪಟೇಲ್, ಕೃಷ್ಣಪ್ರಸಾದ್, ಸಂತೋಷ್, ಲಕ್ಷ್ಮೀ ಶ್ರೀನಿವಾಸ್, ಮಂಜು ರಾಜ್, ಕೃಷ್ಣಪ್ಪ, ಡಾ.ಮಧುಸೂಧನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿ ಅವೈಜ್ಞಾನಿಕವಾಗಿದ್ದು, ಇದರ ವಿರುದ್ಧ ಮುಂದಿನ ವಾರ ಒಕ್ಕಲಿಗರ ಪ್ರಾಬಲ್ಯದ 16 ಜಿಲ್ಲೆಗಳಲ್ಲಿ ಹೋರಾಟ ಮಾಡಲಾಗುತ್ತದೆ’ ಎಂದು ಒಕ್ಕಲಿಗರ ಕ್ರಿಯಾ ಸಮಿತಿ ಸದಸ್ಯರು ತಿಳಿಸಿದರು.</p>.<p>‘ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ಕೈಗೊಳ್ಳಲಾಗುತ್ತಿದ್ದು, ಅದರಲ್ಲಿ ಎಸ್ಸಿ, ಎಸ್ಟಿ ಜನಗಣತಿಯನ್ನು ಪ್ರತ್ಯೇಕವಾಗಿ ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಎಸ್ಸಿ, ಎಸ್ಟಿ ಜನಾಂಗಕ್ಕೆ ಯಾವುದೇ ಉಪಯೋಗವಿಲ್ಲದಿದ್ದರೂ, ಉದ್ದೇಶಪೂರ್ವಕವಾಗಿ ಆ ಜನಾಂಗದ ನಾಯಕರನ್ನು ಮುನ್ನೆಲೆಗೆ ತಂದು ರಾಜ್ಯ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ’ ಎಂದು ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ.ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳನ್ನು ಕೈಗೊಂಡು ಒಂಬತ್ತು ವರ್ಷಗಳೇ ಕಳೆದಿವೆ. ಈ ಸಮೀಕ್ಷೆ ಪ್ರಕಾರ ಹಿಂದುಳಿದ ಆಯೋಗದಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಸಣ್ಣ ಪುಟ್ಟ ಜಾತಿಗಳಿಗೆ ಸೇರಿದವರನ್ನು ಮಾತ್ರ ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ಮಾಡಲಾಗಿದ್ದು ಎಸ್.ಸಿ, ಎಸ್.ಟಿ, ಮುಸ್ಲಿಂ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯವರನ್ನು ಹೊರಗಿಟ್ಟು ಸಂಚು ರೂಪಿಸಲಾಗಿದೆ’ ಎಂದು ದೂರಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಅಂದಾನಪ್ಪ ಮಾತನಾಡಿ, ‘2015ರಲ್ಲಿ ರಾಜ್ಯದಲ್ಲಿ 6.45 ಕೋಟಿ ಜನಸಂಖ್ಯೆ ಇತ್ತು. 2024ರ ವೇಳೆಗೆ 7.2 ಕೋಟಿಯಾಗಿದೆ. ರಾಜ್ಯ ಸರ್ಕಾರ ಜಾತಿ ಗಣತಿ ಮಾಡಿಸಿರುವುದು 5.98 ಕೋಟಿ ಜನಸಂಖ್ಯೆಗೆ ಮಾತ್ರವಾಗಿದ್ದು, ಇದು ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದರು.</p>.<p>ಇತಿಹಾಸ ಸಂಶೋಧಕ ತಲಕಾಡು ಚಿಕ್ಕರಂಗೇಗೌಡ ಮಾತನಾಡಿ, ‘ಈ ಸಮೀಕ್ಷೆ ಮಾಡಿರುವುದರ ಹಿಂದೆ ಲಿಂಗಾಯತ, ಒಕ್ಕಲಿಗರಿಗೆ ತೊಂದರೆ ಕೊಡುವ ವ್ಯವಸ್ಥಿತ ಸಂಚನ್ನು ಸರ್ಕಾರ ರೂಪಿಸಿದೆ’ ಎಂದರು.</p>.<p>ಒಕ್ಕಲಿಗ ಮುಖಂಡರಾದ ಬಿ.ಟಿ.ಶ್ರೀನಿವಾಸ್, ಎ.ಎಸ್. ಗೋವಿಂದೇಗೌಡ, ಕಾಳೇಗೌಡ, ಗೋವಿಂದರಾಜು ಪಟೇಲ್, ಕೃಷ್ಣಪ್ರಸಾದ್, ಸಂತೋಷ್, ಲಕ್ಷ್ಮೀ ಶ್ರೀನಿವಾಸ್, ಮಂಜು ರಾಜ್, ಕೃಷ್ಣಪ್ಪ, ಡಾ.ಮಧುಸೂಧನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>