<p><strong>ಬೆಂಗಳೂರು:</strong> ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲೂ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಇದೇ 12 ರೊಳಗಾಗಿ ಜಿಯೋ ಟ್ಯಾಗಿಂಗ್ ಮುಗಿಸುವಂತೆ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಗಣತಿ ಸಮನ್ವಯ ಸಮಿತಿ ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಒಟ್ಟು ಜನಸಂಖ್ಯೆ ಮತ್ತು ವಲಸೆ ಬಂದಿರುವ ಜನರ ಸಮೀಕ್ಷೆ ನಡೆಸುವ ಬಗ್ಗೆ ದ್ವಂದ್ವ ಇದೆ. ಈ ಸಂಬಂಧ ಸಂಪೂರ್ಣ ಮಾರ್ಗಸೂಚಿ ಈವರೆಗೂ ಸಿದ್ಧವಾಗಿಲ್ಲದ ಕಾರಣ ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 70 ಲಕ್ಷ ವಿದ್ಯುತ್ ಸಂಪರ್ಕಗಳು ಇವೆ. ಅವುಗಳಲ್ಲಿ ಶೇ 20ರಷ್ಟು ಮಾತ್ರ ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.</p>.<p>ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಆರ್. ಯತೀಶ್ ಮಾತನಾಡಿ, ಜಿಯೋ ಟ್ಯಾಗಿಂಗ್ ರೀತಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಯೋಜಿಸಿರುವ ಕಡಿಮೆ ಗಣತಿದಾರರಿಂದ ಸಮೀಕ್ಷೆ ಪೂರ್ಣಗೊಳಿಸಲು ಸಮಯದ ಅಭಾವ ಎದುರಾಗಬಹುದು ಎಂದು ಗಮನಕ್ಕೆ ತಂದರು.</p>.<p>ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಹೆಚ್ಚಿನ ಗಣತಿದಾರರನ್ನು ನೇಮಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದರು.</p>.<p><strong>ಅಲೆಮಾರಿಗಳು ಹೊರಗುಳಿಯದಿರಲಿ:</strong> ಆನೇಕಲ್ ತಾಲ್ಲೂಕಿನ ಹಕ್ಕಿಪಿಕ್ಕಿ ಕಾಲೋನಿ ಹಾಗೂ ರಾಗಿಹಳ್ಳಿಯಲ್ಲಿ ವಾಸಿಸುವ ಪ್ರದೇಶಗಳು ನೆಟ್ ವರ್ಕ್ನಿಂದ ವಂಚಿತವಾಗಿವೆ. ಕೆಲವು ಸ್ಲಂ ಪ್ರದೇಶಗಳಲ್ಲಿಯೂ ಅಧಿಕೃತ ವಿದ್ಯುತ್ ಸಂಪರ್ಕ ಇಲ್ಲದಿದ್ದು, ಇಂತಹ ಪ್ರದೇಶಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು ಎಂದು ಜಗದೀಶ್ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ವಿಶ್ವನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಿರುಪಮಾ ಮೌಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲೂ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಇದೇ 12 ರೊಳಗಾಗಿ ಜಿಯೋ ಟ್ಯಾಗಿಂಗ್ ಮುಗಿಸುವಂತೆ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಗಣತಿ ಸಮನ್ವಯ ಸಮಿತಿ ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಒಟ್ಟು ಜನಸಂಖ್ಯೆ ಮತ್ತು ವಲಸೆ ಬಂದಿರುವ ಜನರ ಸಮೀಕ್ಷೆ ನಡೆಸುವ ಬಗ್ಗೆ ದ್ವಂದ್ವ ಇದೆ. ಈ ಸಂಬಂಧ ಸಂಪೂರ್ಣ ಮಾರ್ಗಸೂಚಿ ಈವರೆಗೂ ಸಿದ್ಧವಾಗಿಲ್ಲದ ಕಾರಣ ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 70 ಲಕ್ಷ ವಿದ್ಯುತ್ ಸಂಪರ್ಕಗಳು ಇವೆ. ಅವುಗಳಲ್ಲಿ ಶೇ 20ರಷ್ಟು ಮಾತ್ರ ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.</p>.<p>ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಆರ್. ಯತೀಶ್ ಮಾತನಾಡಿ, ಜಿಯೋ ಟ್ಯಾಗಿಂಗ್ ರೀತಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಯೋಜಿಸಿರುವ ಕಡಿಮೆ ಗಣತಿದಾರರಿಂದ ಸಮೀಕ್ಷೆ ಪೂರ್ಣಗೊಳಿಸಲು ಸಮಯದ ಅಭಾವ ಎದುರಾಗಬಹುದು ಎಂದು ಗಮನಕ್ಕೆ ತಂದರು.</p>.<p>ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಹೆಚ್ಚಿನ ಗಣತಿದಾರರನ್ನು ನೇಮಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದರು.</p>.<p><strong>ಅಲೆಮಾರಿಗಳು ಹೊರಗುಳಿಯದಿರಲಿ:</strong> ಆನೇಕಲ್ ತಾಲ್ಲೂಕಿನ ಹಕ್ಕಿಪಿಕ್ಕಿ ಕಾಲೋನಿ ಹಾಗೂ ರಾಗಿಹಳ್ಳಿಯಲ್ಲಿ ವಾಸಿಸುವ ಪ್ರದೇಶಗಳು ನೆಟ್ ವರ್ಕ್ನಿಂದ ವಂಚಿತವಾಗಿವೆ. ಕೆಲವು ಸ್ಲಂ ಪ್ರದೇಶಗಳಲ್ಲಿಯೂ ಅಧಿಕೃತ ವಿದ್ಯುತ್ ಸಂಪರ್ಕ ಇಲ್ಲದಿದ್ದು, ಇಂತಹ ಪ್ರದೇಶಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು ಎಂದು ಜಗದೀಶ್ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ವಿಶ್ವನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಿರುಪಮಾ ಮೌಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>