<p><strong>ಬೆಂಗಳೂರು</strong>: ‘ಭೋವಿ ಜನಾಂಗವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತುಂಬಾ ಹಿಂದುಳಿದಿದೆ. ಸಂಖ್ಯೆಯ ದೃಷ್ಟಿಯಿಂದ ಸಮುದಾಯದವರು ಕೇಂದ್ರ ಸರ್ಕಾರ ನಡೆಸಲಿರುವ ಯಲ್ಲಿ ಭೋವಿ ಎಂದೇ ನಮೂದಿಸಬೇಕು. ವಡ್ಡ ಎಂದು ನಮೂದಿಸಬಾರದು’ ಎದು ಭೋವಿ ಜನಾಂಗ ಒಕ್ಕೂಟ ರಾಜ್ಯ ಸಮಿತಿ ಸಮುದಾಯದವರಿಗೆ ಮನವಿ ಮಾಡಿದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ‘ಭೋವಿ ಜನಾಂಗಕ್ಕೆ ಸೇರಿದ ಪ್ರತಿಯೊಬ್ಬರೂ ಜಾತಿ ಜನಗಣತಿಯಲ್ಲಿ ಭಾಗವಹಿಸಬೇಕು. ಕುಟುಂಬದ ಎಲ್ಲ ಸದಸ್ಯರ ವಿವರವನ್ನು ನೀಡಬೇಕು. ಜಾತಿ ಜನಗಣತಿ ನಡೆಯುವಾಗ ಊರುಗಳನ್ನು ತೊರೆಯಬಾರದು’ ಎಂದರು.</p>.<p>‘ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಭೋವಿ ಸೇರಿ ವಿವಿಧ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಲಾಗುತ್ತದೆ. ಈ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಆಯೋಗದ ಶಿಫಾರಸಿನಂತೆ ಸರ್ಕಾರವು ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲಿದೆ. ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಸಮೀಕ್ಷೆ ಸಹಕಾರಿಯಾಗಿದ್ದು, ಜಾತಿಗೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ಒದಗಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭೋವಿ ಜನಾಂಗವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತುಂಬಾ ಹಿಂದುಳಿದಿದೆ. ಸಂಖ್ಯೆಯ ದೃಷ್ಟಿಯಿಂದ ಸಮುದಾಯದವರು ಕೇಂದ್ರ ಸರ್ಕಾರ ನಡೆಸಲಿರುವ ಯಲ್ಲಿ ಭೋವಿ ಎಂದೇ ನಮೂದಿಸಬೇಕು. ವಡ್ಡ ಎಂದು ನಮೂದಿಸಬಾರದು’ ಎದು ಭೋವಿ ಜನಾಂಗ ಒಕ್ಕೂಟ ರಾಜ್ಯ ಸಮಿತಿ ಸಮುದಾಯದವರಿಗೆ ಮನವಿ ಮಾಡಿದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ‘ಭೋವಿ ಜನಾಂಗಕ್ಕೆ ಸೇರಿದ ಪ್ರತಿಯೊಬ್ಬರೂ ಜಾತಿ ಜನಗಣತಿಯಲ್ಲಿ ಭಾಗವಹಿಸಬೇಕು. ಕುಟುಂಬದ ಎಲ್ಲ ಸದಸ್ಯರ ವಿವರವನ್ನು ನೀಡಬೇಕು. ಜಾತಿ ಜನಗಣತಿ ನಡೆಯುವಾಗ ಊರುಗಳನ್ನು ತೊರೆಯಬಾರದು’ ಎಂದರು.</p>.<p>‘ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಭೋವಿ ಸೇರಿ ವಿವಿಧ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಲಾಗುತ್ತದೆ. ಈ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಆಯೋಗದ ಶಿಫಾರಸಿನಂತೆ ಸರ್ಕಾರವು ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲಿದೆ. ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಸಮೀಕ್ಷೆ ಸಹಕಾರಿಯಾಗಿದ್ದು, ಜಾತಿಗೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ಒದಗಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>