<p>ಬೆಂಗಳೂರು: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಯಾವುದೆ ಕಾರಣಕ್ಕೂ ಉಪಜಾತಿಯ ವಿವರವನ್ನು ನಮೂದಿಸಬಾರದು. ಒಂದು ವೇಳೆ ಹಾಗೆ ಬರೆಸಿದರೆ ಈ ಹಿಂದಿನ ಸಮೀಕ್ಷೆಯ ವರದಿಯಂತೆ ಸಮುದಾಯದ ಜನಸಂಖ್ಯೆಯ ಬಗ್ಗೆ ಸ್ಪಷ್ಟತೆ ದೊರೆಯುವುದಿಲ್ಲ’ ಎಂದು ಕರ್ನಾಟಕ ರಾಜ್ಯ ಪ್ರವರ್ಗ–1ರ ಜಾತಿಗಳ ಒಕ್ಕೂಟದ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ತಿಳಿಸಿದರು. </p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ. ಯಾದವ, ಹಣಬರು, ಕಾಡುಗೊಲ್ಲ ಇತ್ಯಾದಿ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ’ ಎಂದರು.</p>.<p>‘ಪ್ರವರ್ಗ 1ರ ಒಕ್ಕೂಟದ ಅಡಿ 97 ಜಾತಿಗಳು ಹಾಗೂ 376 ಉಪಜಾತಿಗಳು ಸೇರಿ ಸುಮಾರು 75 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದೆ. ಅಲೆಮಾರಿ ಜನಾಂಗಗಳಾದ ಗೊಲ್ಲ, ಕಾಡುಗೊಲ್ಲ, ದೊಂಬಿದಾಸರು, ಜೋಗಿಗಳು ಸೇರಿ 46 ಜಾತಿಗಳ ಜನರ ಜೀವನ ಹೀನಾಯ ಸ್ಥಿತಿಗೆ ತಲುಪಿದೆ. ಆದ್ದರಿಂದ ಪ್ರವರ್ಗ 1ರಡಿ ಬರುವ ಜಾತಿಗಳಿಗೆ ಮೀಸಲಾತಿ ಹೆಚ್ಚಿಸಿ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p> <strong>‘ಹಿಂದೂ ಮರಾಠವೆಂದು ನಮೂದಿಸಿ’ </strong></p><p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಮರಾಠರು ಧರ್ಮದ ಕಾಲಂನಲ್ಲಿ ‘ಹಿಂದೂ’ ವೆಂದು ಜಾತಿಯ ಕಾಲಂನಲ್ಲಿ ‘ಮರಾಠ’ರೆಂದು ನಮೂದಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ ಸುದ್ದಿಗೋಷ್ಠಿಯಲ್ಲಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಯಾವುದೆ ಕಾರಣಕ್ಕೂ ಉಪಜಾತಿಯ ವಿವರವನ್ನು ನಮೂದಿಸಬಾರದು. ಒಂದು ವೇಳೆ ಹಾಗೆ ಬರೆಸಿದರೆ ಈ ಹಿಂದಿನ ಸಮೀಕ್ಷೆಯ ವರದಿಯಂತೆ ಸಮುದಾಯದ ಜನಸಂಖ್ಯೆಯ ಬಗ್ಗೆ ಸ್ಪಷ್ಟತೆ ದೊರೆಯುವುದಿಲ್ಲ’ ಎಂದು ಕರ್ನಾಟಕ ರಾಜ್ಯ ಪ್ರವರ್ಗ–1ರ ಜಾತಿಗಳ ಒಕ್ಕೂಟದ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ತಿಳಿಸಿದರು. </p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ. ಯಾದವ, ಹಣಬರು, ಕಾಡುಗೊಲ್ಲ ಇತ್ಯಾದಿ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ’ ಎಂದರು.</p>.<p>‘ಪ್ರವರ್ಗ 1ರ ಒಕ್ಕೂಟದ ಅಡಿ 97 ಜಾತಿಗಳು ಹಾಗೂ 376 ಉಪಜಾತಿಗಳು ಸೇರಿ ಸುಮಾರು 75 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದೆ. ಅಲೆಮಾರಿ ಜನಾಂಗಗಳಾದ ಗೊಲ್ಲ, ಕಾಡುಗೊಲ್ಲ, ದೊಂಬಿದಾಸರು, ಜೋಗಿಗಳು ಸೇರಿ 46 ಜಾತಿಗಳ ಜನರ ಜೀವನ ಹೀನಾಯ ಸ್ಥಿತಿಗೆ ತಲುಪಿದೆ. ಆದ್ದರಿಂದ ಪ್ರವರ್ಗ 1ರಡಿ ಬರುವ ಜಾತಿಗಳಿಗೆ ಮೀಸಲಾತಿ ಹೆಚ್ಚಿಸಿ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p> <strong>‘ಹಿಂದೂ ಮರಾಠವೆಂದು ನಮೂದಿಸಿ’ </strong></p><p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಮರಾಠರು ಧರ್ಮದ ಕಾಲಂನಲ್ಲಿ ‘ಹಿಂದೂ’ ವೆಂದು ಜಾತಿಯ ಕಾಲಂನಲ್ಲಿ ‘ಮರಾಠ’ರೆಂದು ನಮೂದಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ ಸುದ್ದಿಗೋಷ್ಠಿಯಲ್ಲಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>