40 ಎಕರೆ ವಿಸ್ತೀರ್ಣದಲ್ಲಿ ಜಾತ್ರೆಗೆ ವ್ಯವಸ್ಥೆ ಮಾಡಿದ್ದು, ರೈತರಿಗೆ ತಂಗುದಾಣದ ವ್ಯವಸ್ಥೆ, ಸೂಕ್ತ ಭದ್ರತೆ ಒದಗಿಸಲಾಗುವುದು. ಹೈದರಾಬಾದ್ ಕರ್ನಾಟಕ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ತಮಿಳುನಾಡಿನ ಹೊಸೂರು, ಆಂಧ್ರಪ್ರದೇಶದ ರೈತರು ಜಾನುವಾರುಗಳ ಖರೀದಿ ಮತ್ತು ಮಾರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರೈತರು ಮತ್ತು ರಾಸುಗಳಿಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯಿಂದ ಸೌಕರ್ಯ ಕಲ್ಪಿಸಲಾಗುತ್ತಿದೆ. ತಾತ್ಕಾಲಿಕವಾಗಿ ಪಶು ಆಸ್ವತ್ರೆ ತೆರೆದು ಜಾನುವಾರುಗಳಿಗೆ ಲಸಿಕೆಗಳನ್ನು ನೀಡುವ ವ್ಯವಸ್ಥೆ ಇದೆ ಎಂದರು.