<p><strong>ಬೆಂಗಳೂರು:</strong> ಉದ್ಯಾನ ನಗರಿಯ ಮುಕ್ಕಾಲು ಪಾಲು ಜನರಿಗೆ ಜೀವ ಜಲ ಪೂರೈಸುವ ಕಾವೇರಿ ನದಿಗೆ ಗೌರವ ಸಲ್ಲಿಸುವುದಕ್ಕಾಗಿ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ನಗರದ ಸ್ಯಾಂಕಿ ಕೆರೆಯಲ್ಲಿ 'ಕಾವೇರಿ ಆರತಿ' ಕಾರ್ಯಕ್ರಮವನ್ನು ಆಯೋಜಿಸುತ್ತಿದೆ</p>.<p>ಇದೇ 21 ರಂದು ಸಂಜೆ ಸ್ಯಾಂಕಿ ಕೆರೆಯ ದಂಡೆಯ ಮೇಲೆ 'ಕಾವೇರಿ ಆರತಿ' ನಡೆಯಲಿದೆ. ಬೆಂಗಳೂರು ಜಲಮಂಡಳಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಭಾನುವಾರ ಸ್ಯಾಂಕಿ ಕೆರೆಯ ಆವರಣದಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿದೆ.</p>.<p>ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆಯಲಿರುವ 'ಗಂಗಾರತಿ' ಮಾದರಿಯಲ್ಲೇ ಈ ಕಾರ್ಯಕ್ರಮವೂ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದಿಂದ ಪುರೋಹಿತರನ್ನು ಕರೆಸಲು ತೀರ್ಮಾನಿಸಲಾಗಿದೆ.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರ ಕುಟುಂಬಗಳು ಹಾಗೂ ಸಾರ್ವಜನಿಕರು ಸೇರಿ 10 ಸಾವಿರಕ್ಕೂ ಅಧಿಕ ಜನರು ಕಾವೇರಿ ಆರತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸುವ ಸಾಧ್ಯತೆ ಇದೆ.</p>.<p>ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಮತ್ತು ವಿಶೇಷ ಪೂಜೆ ನಡೆಯಲಿದೆ. ನಂತರ ಭಾಗಮಂಡಲದಲ್ಲಿರುವ ಕಾವೇರಿ, ಕನ್ನಿಕಾ ಮತ್ತು ಸುಜ್ಯೋತಿ ನದಿಗಳ ಸಂಗಮ ತಾಣದಿಂದ ಸಂಗ್ರಹಿಸಿ ತರುವ ಪವಿತ್ರ ಜಲವನ್ನು ‘ತೀರ್ಥ’ವಾಗಿ ವಿತರಿಸಲಾಗುತ್ತದೆ.</p>.<p>ಕಾರ್ಯಕ್ರಮದಲ್ಲಿ ಲೇಸರ್ ಪ್ರದರ್ಶನ ಮತ್ತು ಲೈವ್ ಆರ್ಕೆಸ್ಟ್ರಾ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳಿರುತ್ತವೆ.</p>.<p>ಇದು ಒಂದು ಐತಿಹಾಸಿಕ ಕಾರ್ಯಕ್ರಮ’ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.</p>.<p>ಕಾವೇರಿ ನದಿಯ ಉಪನದಿಯಾಗಿರುವ ವೃಷಭಾವತಿಯ ಉಗಮ ಸ್ಥಾನ ಸ್ಯಾಂಕಿ ಕೆರೆಯಾಗಿರುವ ಕಾರಣದಿಂದಲೂ ಕಾವೇರಿ ಆರತಿಗೆ ಈ ಕೆರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.</p>.<p>'ಈ ಕೆರೆ ಸಮೀಪದಲ್ಲಿ ಶ್ರೀಜಲಗಂಗಮ್ಮ ತಾಯಿ ದೇವಾಲಯವಿದೆ. ಇದು ವೃಷಭಾವತಿಯ ಉಗಮ ಸ್ಥಾನವೆಂದು ಗುರುತಿಸಲು ನಮ್ಮ ಪೂರ್ವಜರು ದೇವಾಲಯವನ್ನು ಇಲ್ಲಿ ಸ್ಥಾಪಿಸಿದ್ದಾರೆ. ಪ್ರತಿ ವರ್ಷ ಕಾವೇರಿ ಆರತಿಯನ್ನು ಇಲ್ಲಿ ನಡೆಸಲಾಗುತ್ತದೆ' ಎಂದು ರಾಮ್ಪ್ರಸಾದ್ ಮನೋಹರ್ ತಿಳಿಸಿದರು.</p>.<p>ವೃಷಭಾವತಿ ಉಗಮದ ಮೂಲದ ಬಗ್ಗೆ ಕೆಲವು ವಾದಗಳಿವೆ. ಕೆಲವು ಇತಿಹಾಸಕಾರರು ಬಸವನಗುಡಿಯ ನಂದಿ ಪಾದದಲ್ಲಿ ವೃಷಭಾವತಿ ಉಗಮಿಸುತ್ತದೆ ಎನ್ನುತ್ತಾರೆ. ಕೆಲವರು ಸ್ಯಾಂಕಿ ಕೆರೆಯಲ್ಲೇ ಉಗಮವಾಗುತ್ತದೆ ಎನ್ನುತ್ತಾರೆ.</p>.<p>ಈ ನಡುವೆ ಜಲಮಂಡಳಿ, ಗಾಳಿ ಆಂಜನೇಯಸ್ವಾಮಿ ದೇವಾಲಯದ ಬಳಿ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಯೋಜಿಸಿತ್ತು. ಆದರೆ,ಜಾಗದ ಕೊರತೆ ಹಾಗೂ ಸಮೀಪದಲ್ಲೇ ಚರಂಡಿ ನೀರು ಹರಿಯುತ್ತಿರುವ ಕಾರಣರಿಂದ, ಆ ಯೋಜನೆಯನ್ನು ಕೈಬಿಡಲಾಯಿತು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉದ್ಯಾನ ನಗರಿಯ ಮುಕ್ಕಾಲು ಪಾಲು ಜನರಿಗೆ ಜೀವ ಜಲ ಪೂರೈಸುವ ಕಾವೇರಿ ನದಿಗೆ ಗೌರವ ಸಲ್ಲಿಸುವುದಕ್ಕಾಗಿ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ನಗರದ ಸ್ಯಾಂಕಿ ಕೆರೆಯಲ್ಲಿ 'ಕಾವೇರಿ ಆರತಿ' ಕಾರ್ಯಕ್ರಮವನ್ನು ಆಯೋಜಿಸುತ್ತಿದೆ</p>.<p>ಇದೇ 21 ರಂದು ಸಂಜೆ ಸ್ಯಾಂಕಿ ಕೆರೆಯ ದಂಡೆಯ ಮೇಲೆ 'ಕಾವೇರಿ ಆರತಿ' ನಡೆಯಲಿದೆ. ಬೆಂಗಳೂರು ಜಲಮಂಡಳಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಭಾನುವಾರ ಸ್ಯಾಂಕಿ ಕೆರೆಯ ಆವರಣದಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿದೆ.</p>.<p>ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆಯಲಿರುವ 'ಗಂಗಾರತಿ' ಮಾದರಿಯಲ್ಲೇ ಈ ಕಾರ್ಯಕ್ರಮವೂ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದಿಂದ ಪುರೋಹಿತರನ್ನು ಕರೆಸಲು ತೀರ್ಮಾನಿಸಲಾಗಿದೆ.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರ ಕುಟುಂಬಗಳು ಹಾಗೂ ಸಾರ್ವಜನಿಕರು ಸೇರಿ 10 ಸಾವಿರಕ್ಕೂ ಅಧಿಕ ಜನರು ಕಾವೇರಿ ಆರತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸುವ ಸಾಧ್ಯತೆ ಇದೆ.</p>.<p>ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಮತ್ತು ವಿಶೇಷ ಪೂಜೆ ನಡೆಯಲಿದೆ. ನಂತರ ಭಾಗಮಂಡಲದಲ್ಲಿರುವ ಕಾವೇರಿ, ಕನ್ನಿಕಾ ಮತ್ತು ಸುಜ್ಯೋತಿ ನದಿಗಳ ಸಂಗಮ ತಾಣದಿಂದ ಸಂಗ್ರಹಿಸಿ ತರುವ ಪವಿತ್ರ ಜಲವನ್ನು ‘ತೀರ್ಥ’ವಾಗಿ ವಿತರಿಸಲಾಗುತ್ತದೆ.</p>.<p>ಕಾರ್ಯಕ್ರಮದಲ್ಲಿ ಲೇಸರ್ ಪ್ರದರ್ಶನ ಮತ್ತು ಲೈವ್ ಆರ್ಕೆಸ್ಟ್ರಾ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳಿರುತ್ತವೆ.</p>.<p>ಇದು ಒಂದು ಐತಿಹಾಸಿಕ ಕಾರ್ಯಕ್ರಮ’ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.</p>.<p>ಕಾವೇರಿ ನದಿಯ ಉಪನದಿಯಾಗಿರುವ ವೃಷಭಾವತಿಯ ಉಗಮ ಸ್ಥಾನ ಸ್ಯಾಂಕಿ ಕೆರೆಯಾಗಿರುವ ಕಾರಣದಿಂದಲೂ ಕಾವೇರಿ ಆರತಿಗೆ ಈ ಕೆರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.</p>.<p>'ಈ ಕೆರೆ ಸಮೀಪದಲ್ಲಿ ಶ್ರೀಜಲಗಂಗಮ್ಮ ತಾಯಿ ದೇವಾಲಯವಿದೆ. ಇದು ವೃಷಭಾವತಿಯ ಉಗಮ ಸ್ಥಾನವೆಂದು ಗುರುತಿಸಲು ನಮ್ಮ ಪೂರ್ವಜರು ದೇವಾಲಯವನ್ನು ಇಲ್ಲಿ ಸ್ಥಾಪಿಸಿದ್ದಾರೆ. ಪ್ರತಿ ವರ್ಷ ಕಾವೇರಿ ಆರತಿಯನ್ನು ಇಲ್ಲಿ ನಡೆಸಲಾಗುತ್ತದೆ' ಎಂದು ರಾಮ್ಪ್ರಸಾದ್ ಮನೋಹರ್ ತಿಳಿಸಿದರು.</p>.<p>ವೃಷಭಾವತಿ ಉಗಮದ ಮೂಲದ ಬಗ್ಗೆ ಕೆಲವು ವಾದಗಳಿವೆ. ಕೆಲವು ಇತಿಹಾಸಕಾರರು ಬಸವನಗುಡಿಯ ನಂದಿ ಪಾದದಲ್ಲಿ ವೃಷಭಾವತಿ ಉಗಮಿಸುತ್ತದೆ ಎನ್ನುತ್ತಾರೆ. ಕೆಲವರು ಸ್ಯಾಂಕಿ ಕೆರೆಯಲ್ಲೇ ಉಗಮವಾಗುತ್ತದೆ ಎನ್ನುತ್ತಾರೆ.</p>.<p>ಈ ನಡುವೆ ಜಲಮಂಡಳಿ, ಗಾಳಿ ಆಂಜನೇಯಸ್ವಾಮಿ ದೇವಾಲಯದ ಬಳಿ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಯೋಜಿಸಿತ್ತು. ಆದರೆ,ಜಾಗದ ಕೊರತೆ ಹಾಗೂ ಸಮೀಪದಲ್ಲೇ ಚರಂಡಿ ನೀರು ಹರಿಯುತ್ತಿರುವ ಕಾರಣರಿಂದ, ಆ ಯೋಜನೆಯನ್ನು ಕೈಬಿಡಲಾಯಿತು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>