ಜುಲೈ ತಿಂಗಳಲ್ಲಿ ಸದ್ಗುರು ‘ಕಾವೇರಿ ಕೂಗು’ ಅಭಿಯಾನವನ್ನು ಆರಂಭಿಸಿದ್ದು, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಸೇರಿದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ 242 ಕೋಟಿ ಮರಗಳನ್ನು ಬೆಳೆಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ಸಿನಿ ತಾರೆಯರು, ಕ್ರೀಡಾಪಟುಗಳು, ರಾಜಕಾರಣಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕೈ ಜೋಡಿಸಿದ್ದಾರೆ. ಉಭಯ ರಾಜ್ಯ ಸರ್ಕಾರಗಳು ಸಹ ಈ ಕಾರ್ಯಕ್ಕೆ ಬೆಂಬಲ ಸೂಚಿಸಿವೆ.