ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಪ್ರಮುಖ ಪಾರಂಪರಿಕ ಕ್ಷೇತ್ರಗಳ ಕೆತ್ತನೆಗಳ ಮಾದರಿಗಳನ್ನು ತಯಾರಿಸಿ, ಮಾರಾಟ ಮಾಡಲು ನಿರ್ಧರಿಸಿದ್ದೇವೆ. ಈ ಮೂಲಕ ಇಲ್ಲಿನ ಕಲೆ, ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವುದು ನಮ್ಮ ಉದ್ದೇಶ. ಹಂಪಿ, ಐಹೋಳೆ, ಪಟ್ಟದಕಲ್ಲು, ಬೇಲೂರು, ಹಳೇಬೀಡು, ಬಾದಾಮಿ ಸೇರಿದಂತೆ ವಿವಿಧ ಪಾರಂಪರಿಕ ಸ್ಥಳಗಳಲ್ಲಿನ ವಾಸ್ತುಶಿಲ್ಪದ ಕಲಾಕೃತಿಗಳನ್ನು ಕಾವೇರಿ ಎಂಪೋರಿಯಂನಲ್ಲಿ ಇಡಲಾಗುತ್ತದೆ. ಈ ಮೂಲಕ ವಾಸ್ತುಶಿಲ್ಪ ಕಲಾಕೃತಿಗಳ ಮಾರಾಟಕ್ಕೆ ಬೃಹತ್ ವೇದಿಕೆಯನ್ನು ಕಲ್ಪಿಸಲಾಗುತ್ತಿದೆ’ ಎಂದು ವಿವರಿಸಿದರು.