ಅಲ್ಲದೆ, ಅದನ್ನು ತಕ್ಷಣವೇ ಖಾಲಿ ಮಾಡುವಂತೆ ನೋಟಿಸ್ ನೀಡಿಲ್ಲ. ವಿದ್ಯುತ್ ಅಥವಾ ನೀರು ಸಂಪರ್ಕ ಕಡಿತ ಮಾಡುತ್ತೇವೆ ಎಂದೂ ಹೇಳಿಲ್ಲ. ಈ ಹಿಂದೆ ಕೆ.ಜೆ.ಜಾರ್ಜ್ ಅವರಿಗೆ ‘ಕಾವೇರಿ’ ಹಂಚಿಕೆ ಮಾಡಲಾಗಿತ್ತು. ಅವರು ಅದನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದರು. ಈಗ ಮನೆ ಬಿಟ್ಟುಕೊಡುವಂತೆ ಜಾರ್ಜ್ ಅವರಿಗೆ ಮೌಖಿಕವಾಗಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.