<p><strong>ಬೆಂಗಳೂರು:</strong> ‘ಕಾವೇರಿ’ ನಿವಾಸಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯೆ ಹಗ್ಗ–ಜಗ್ಗಾಟ ನಡೆದಿಲ್ಲ ಎಂದು ಎರಡೂ ಕಡೆಯ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಅಧಿಕೃತ ನಿವಾಸ ‘ಕೃಷ್ಣಾ’ ಪಕ್ಕದಲ್ಲೇ ‘ಕಾವೇರಿ’ ಇರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅದಕ್ಕೆ ಕೋರಿಕೆ ಸಲ್ಲಿಸಿದ್ದರು. ಆದ್ದರಿಂದ, ಅವರಿಗೆ ಆ ನಿವಾಸವನ್ನು ಹಂಚಿಕೆ ಮಾಡಲಾಗಿದೆ ಎಂದು ಆಡಳಿತ ಮತ್ತು ಸಿಬ್ಬಂದಿ ಇಲಾಖೆ (ಶಿಷ್ಟಾಚಾರ) ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಲ್ಲದೆ, ಅದನ್ನು ತಕ್ಷಣವೇ ಖಾಲಿ ಮಾಡುವಂತೆ ನೋಟಿಸ್ ನೀಡಿಲ್ಲ. ವಿದ್ಯುತ್ ಅಥವಾ ನೀರು ಸಂಪರ್ಕ ಕಡಿತ ಮಾಡುತ್ತೇವೆ ಎಂದೂ ಹೇಳಿಲ್ಲ. ಈ ಹಿಂದೆ ಕೆ.ಜೆ.ಜಾರ್ಜ್ ಅವರಿಗೆ ‘ಕಾವೇರಿ’ ಹಂಚಿಕೆ ಮಾಡಲಾಗಿತ್ತು. ಅವರು ಅದನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದರು. ಈಗ ಮನೆ ಬಿಟ್ಟುಕೊಡುವಂತೆ ಜಾರ್ಜ್ ಅವರಿಗೆ ಮೌಖಿಕವಾಗಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಂತಹ ಪ್ರಮುಖರಿಗೆ ನೋಟಿಸ್ ನೀಡಿ, ತಕ್ಷಣವೇ ಬಿಟ್ಟುಕೊಡಿ ಎಂದು ತಾಕೀತು ಮಾಡುವ ಪ್ರಶ್ನೆಯೇ ಇಲ್ಲ. ಸದ್ಯ, ಸಿದ್ದರಾಮಯ್ಯ ಅವರಿಗೆ ರೇಸ್ ವ್ಯೂ –2 ನಿವಾಸ ಹಂಚಿಕೆ ಆಗಿದೆ’ ಎಂದರು.</p>.<p class="Subhead"><strong>ತೆರವಿಗೆ ಸಿದ್ಧ: </strong>ಸಿದ್ದರಾಮಯ್ಯ ಅವರು ‘ಕಾವೇರಿ’ ನಿವಾಸ ತೆರವಿಗೆ ಸಿದ್ಧರಿದ್ದು, ಪರ್ಯಾಯ ವ್ಯವಸ್ಥೆವರೆಗೂ ಅಲ್ಲೇ ಇರುತ್ತಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.</p>.<p>‘ಕಾವೇರಿ’ ಮನೆ ಬಳಿ ಸಿದ್ದರಾಮಯ್ಯ ಅವರ ಹೆಸರಿನ ಫಲಕವಷ್ಟೇ ಇತ್ತು. ವಿರೋಧ ಪಕ್ಷದ ನಾಯಕರಾದ ಮೇಲೆ ಹೊಸ ಫಲಕ ಅಳವಡಿಸಲು ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಹಳೆಯದನ್ನು ತೆಗೆದಿದ್ದು, ಹೊಸದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾವೇರಿ’ ನಿವಾಸಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯೆ ಹಗ್ಗ–ಜಗ್ಗಾಟ ನಡೆದಿಲ್ಲ ಎಂದು ಎರಡೂ ಕಡೆಯ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಅಧಿಕೃತ ನಿವಾಸ ‘ಕೃಷ್ಣಾ’ ಪಕ್ಕದಲ್ಲೇ ‘ಕಾವೇರಿ’ ಇರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅದಕ್ಕೆ ಕೋರಿಕೆ ಸಲ್ಲಿಸಿದ್ದರು. ಆದ್ದರಿಂದ, ಅವರಿಗೆ ಆ ನಿವಾಸವನ್ನು ಹಂಚಿಕೆ ಮಾಡಲಾಗಿದೆ ಎಂದು ಆಡಳಿತ ಮತ್ತು ಸಿಬ್ಬಂದಿ ಇಲಾಖೆ (ಶಿಷ್ಟಾಚಾರ) ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಅಲ್ಲದೆ, ಅದನ್ನು ತಕ್ಷಣವೇ ಖಾಲಿ ಮಾಡುವಂತೆ ನೋಟಿಸ್ ನೀಡಿಲ್ಲ. ವಿದ್ಯುತ್ ಅಥವಾ ನೀರು ಸಂಪರ್ಕ ಕಡಿತ ಮಾಡುತ್ತೇವೆ ಎಂದೂ ಹೇಳಿಲ್ಲ. ಈ ಹಿಂದೆ ಕೆ.ಜೆ.ಜಾರ್ಜ್ ಅವರಿಗೆ ‘ಕಾವೇರಿ’ ಹಂಚಿಕೆ ಮಾಡಲಾಗಿತ್ತು. ಅವರು ಅದನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದರು. ಈಗ ಮನೆ ಬಿಟ್ಟುಕೊಡುವಂತೆ ಜಾರ್ಜ್ ಅವರಿಗೆ ಮೌಖಿಕವಾಗಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಂತಹ ಪ್ರಮುಖರಿಗೆ ನೋಟಿಸ್ ನೀಡಿ, ತಕ್ಷಣವೇ ಬಿಟ್ಟುಕೊಡಿ ಎಂದು ತಾಕೀತು ಮಾಡುವ ಪ್ರಶ್ನೆಯೇ ಇಲ್ಲ. ಸದ್ಯ, ಸಿದ್ದರಾಮಯ್ಯ ಅವರಿಗೆ ರೇಸ್ ವ್ಯೂ –2 ನಿವಾಸ ಹಂಚಿಕೆ ಆಗಿದೆ’ ಎಂದರು.</p>.<p class="Subhead"><strong>ತೆರವಿಗೆ ಸಿದ್ಧ: </strong>ಸಿದ್ದರಾಮಯ್ಯ ಅವರು ‘ಕಾವೇರಿ’ ನಿವಾಸ ತೆರವಿಗೆ ಸಿದ್ಧರಿದ್ದು, ಪರ್ಯಾಯ ವ್ಯವಸ್ಥೆವರೆಗೂ ಅಲ್ಲೇ ಇರುತ್ತಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.</p>.<p>‘ಕಾವೇರಿ’ ಮನೆ ಬಳಿ ಸಿದ್ದರಾಮಯ್ಯ ಅವರ ಹೆಸರಿನ ಫಲಕವಷ್ಟೇ ಇತ್ತು. ವಿರೋಧ ಪಕ್ಷದ ನಾಯಕರಾದ ಮೇಲೆ ಹೊಸ ಫಲಕ ಅಳವಡಿಸಲು ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಹಳೆಯದನ್ನು ತೆಗೆದಿದ್ದು, ಹೊಸದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>