<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆ ಕೆರೆ ಹಿಂಭಾಗದ ಬೈರವೇಶ್ವರ ನಗರ, ಅಂದಾನಪ್ಪ ಲೇಔಟ್ ನಿವಾಸಿಗಳಿಗೆ ಸಿಎಂಸಿ ನೀರೂ ಇಲ್ಲ. ಇತ್ತ ಕಾವೇರಿ ನೀರೂ ಕೈಕೊಟ್ಟಿದೆ. ಇದರಿಂದಾಗಿ 50ಕ್ಕೂ ಅಧಿಕ ಮನೆಗಳು ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಿಸುತ್ತಿವೆ.</p>.<p>ಈ ಎರಡು ಲೇಔಟ್ಗಳಲ್ಲಿ ಬೋರ್ವೆಲ್ ಸೌಲಭ್ಯವಿಲ್ಲ. 8ನೇ ಮೈಲಿ ಸಮೀಪದಲ್ಲಿ ಉಂಟಾಗಿರುವ ಪೈಪ್ಲೈನ್ ಸಮಸ್ಯೆಯಿಂದ ಕಾವೇರಿ ನೀರು ಪೂರೈಕೆಯೂ ಸ್ಥಗಿತಗೊಂಡಿದೆ. ಹೀಗಾಗಿ ನೀರಿನ ಸಮಸ್ಯೆ ತಲೆದೋರಿದೆ. </p>.<p>‘ನೀರಿನ ಕೊರತೆಯಿಂದಾಗಿ ಟ್ಯಾಂಕರ್ ನೀರನ್ನು ಆಶ್ರಯಿಸಬೇಕಿದೆ. ಆದರೆ, ದುಬಾರಿ ದರ ನೀಡಿ ನೀರು ತರಿಸಲು ಆಗದೇ ಜನರು ತತ್ತರಿಸುತ್ತಿದ್ದಾರೆ’ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಮನೆ ಬಾಡಿಗೆ ಕಟ್ಟಬೇಕು. ಜೊತೆಗೆ ಟ್ಯಾಂಕರ್ ನೀರಿಗಾಗಿ ತಿಂಗಳಿಗೆ ₹2,000 ಎತ್ತಿಡಬೇಕು. ಸಾಮಾನ್ಯ ಜನರಿಗೆ ಇದು ದುಬಾರಿ. ಸಂಬಂಧಪಟ್ಟ ಅಧಿಕಾರಿಗಳು ನೀರಿನ ಸಮಸ್ಯೆಗೆ ಬೇಗ ಪರಿಹಾರ ಒದಗಿಸಬೇಕು’ ಎಂದು ಖಾಸಗಿ ಸಂಸ್ಥೆಯ ಕಾರ್ಮಿಕ ಬಾಣಗೆರೆ ವಿಶ್ವನಾಥ್ ನಾಯಕ ಆಗ್ರಹಿಸಿದರು.</p>.<p>‘ಸುಮಾರು ನಾಲ್ಕು ತಿಂಗಳಿನಿಂದ ಈ ಪ್ರದೇಶದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಉಳ್ಳವರು ಟ್ಯಾಂಕರ್ ನೀರು ತರಿಸಿಕೊಳ್ಳುತ್ತಿದ್ದಾರೆ. ಇಲ್ಲದವರು ಉಚಿತ ನೀರಿಗಾಗಿ ಕಾಯುತ್ತ ಕುಳಿತುಕೊಳ್ಳುವಂತಾಗಿದೆ. ಕಾವೇರಿ ನೀರನ್ನಾದರೂ ಸರಿಯಾಗಿ ಬಿಟ್ಟಿದ್ದರೆ ಪರಿಸ್ಥಿತಿ ಸುಧಾರಿಸುತ್ತಿತ್ತು’ ಎಂದು ಗೃಹಿಣಿ ಪವಿತ್ರಾ ಹೇಳಿದರು.</p>.<p>‘ಬೇಸಿಗೆಯಲ್ಲಿ ನೀರಿನ ಕೊರತೆ ನೀಗಿಸಲು ಜಲಮಂಡಳಿ ವಿಫಲವಾಗಿದೆ. ಮಳೆಗಾಲ ಆರಂಭವಾಗಿದ್ದು ಸಮಸ್ಯೆಯನ್ನು ಶೀಘ್ರ ಬಗೆಹರಿಸದಿದ್ದರೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಸ್ಥಳೀಯ ನಿವಾಸಿ ಬಿ.ಎಂ. ಜಗದೀಶ್ ಎಚ್ಚರಿಕೆ ನೀಡಿದರು.</p>.<p>‘ನೀರಿನ ಸಮಸ್ಯೆಯ ಕಾರಣದಿಂದಾಗಿ ಈ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲಾ– ಕಾಲೇಜಿನ ತರಗತಿಗಳಿಗೆ, ಪರೀಕ್ಷೆ ಹೋಗಲು ಸಾಧ್ಯವಾಗುತ್ತಿಲ್ಲ‘ ಎಂದು ವಿದ್ಯಾರ್ಥಿ ಗಣೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆ ಕೆರೆ ಹಿಂಭಾಗದ ಬೈರವೇಶ್ವರ ನಗರ, ಅಂದಾನಪ್ಪ ಲೇಔಟ್ ನಿವಾಸಿಗಳಿಗೆ ಸಿಎಂಸಿ ನೀರೂ ಇಲ್ಲ. ಇತ್ತ ಕಾವೇರಿ ನೀರೂ ಕೈಕೊಟ್ಟಿದೆ. ಇದರಿಂದಾಗಿ 50ಕ್ಕೂ ಅಧಿಕ ಮನೆಗಳು ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಿಸುತ್ತಿವೆ.</p>.<p>ಈ ಎರಡು ಲೇಔಟ್ಗಳಲ್ಲಿ ಬೋರ್ವೆಲ್ ಸೌಲಭ್ಯವಿಲ್ಲ. 8ನೇ ಮೈಲಿ ಸಮೀಪದಲ್ಲಿ ಉಂಟಾಗಿರುವ ಪೈಪ್ಲೈನ್ ಸಮಸ್ಯೆಯಿಂದ ಕಾವೇರಿ ನೀರು ಪೂರೈಕೆಯೂ ಸ್ಥಗಿತಗೊಂಡಿದೆ. ಹೀಗಾಗಿ ನೀರಿನ ಸಮಸ್ಯೆ ತಲೆದೋರಿದೆ. </p>.<p>‘ನೀರಿನ ಕೊರತೆಯಿಂದಾಗಿ ಟ್ಯಾಂಕರ್ ನೀರನ್ನು ಆಶ್ರಯಿಸಬೇಕಿದೆ. ಆದರೆ, ದುಬಾರಿ ದರ ನೀಡಿ ನೀರು ತರಿಸಲು ಆಗದೇ ಜನರು ತತ್ತರಿಸುತ್ತಿದ್ದಾರೆ’ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಮನೆ ಬಾಡಿಗೆ ಕಟ್ಟಬೇಕು. ಜೊತೆಗೆ ಟ್ಯಾಂಕರ್ ನೀರಿಗಾಗಿ ತಿಂಗಳಿಗೆ ₹2,000 ಎತ್ತಿಡಬೇಕು. ಸಾಮಾನ್ಯ ಜನರಿಗೆ ಇದು ದುಬಾರಿ. ಸಂಬಂಧಪಟ್ಟ ಅಧಿಕಾರಿಗಳು ನೀರಿನ ಸಮಸ್ಯೆಗೆ ಬೇಗ ಪರಿಹಾರ ಒದಗಿಸಬೇಕು’ ಎಂದು ಖಾಸಗಿ ಸಂಸ್ಥೆಯ ಕಾರ್ಮಿಕ ಬಾಣಗೆರೆ ವಿಶ್ವನಾಥ್ ನಾಯಕ ಆಗ್ರಹಿಸಿದರು.</p>.<p>‘ಸುಮಾರು ನಾಲ್ಕು ತಿಂಗಳಿನಿಂದ ಈ ಪ್ರದೇಶದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಉಳ್ಳವರು ಟ್ಯಾಂಕರ್ ನೀರು ತರಿಸಿಕೊಳ್ಳುತ್ತಿದ್ದಾರೆ. ಇಲ್ಲದವರು ಉಚಿತ ನೀರಿಗಾಗಿ ಕಾಯುತ್ತ ಕುಳಿತುಕೊಳ್ಳುವಂತಾಗಿದೆ. ಕಾವೇರಿ ನೀರನ್ನಾದರೂ ಸರಿಯಾಗಿ ಬಿಟ್ಟಿದ್ದರೆ ಪರಿಸ್ಥಿತಿ ಸುಧಾರಿಸುತ್ತಿತ್ತು’ ಎಂದು ಗೃಹಿಣಿ ಪವಿತ್ರಾ ಹೇಳಿದರು.</p>.<p>‘ಬೇಸಿಗೆಯಲ್ಲಿ ನೀರಿನ ಕೊರತೆ ನೀಗಿಸಲು ಜಲಮಂಡಳಿ ವಿಫಲವಾಗಿದೆ. ಮಳೆಗಾಲ ಆರಂಭವಾಗಿದ್ದು ಸಮಸ್ಯೆಯನ್ನು ಶೀಘ್ರ ಬಗೆಹರಿಸದಿದ್ದರೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಸ್ಥಳೀಯ ನಿವಾಸಿ ಬಿ.ಎಂ. ಜಗದೀಶ್ ಎಚ್ಚರಿಕೆ ನೀಡಿದರು.</p>.<p>‘ನೀರಿನ ಸಮಸ್ಯೆಯ ಕಾರಣದಿಂದಾಗಿ ಈ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲಾ– ಕಾಲೇಜಿನ ತರಗತಿಗಳಿಗೆ, ಪರೀಕ್ಷೆ ಹೋಗಲು ಸಾಧ್ಯವಾಗುತ್ತಿಲ್ಲ‘ ಎಂದು ವಿದ್ಯಾರ್ಥಿ ಗಣೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>