<p>ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ರಂದು ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿವೆ.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.</p>.<p>ಬಂದ್ಗೆ ರೈತ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ನವನಿರ್ಮಾಣ ಸೇನೆ ಬೆಂಬಲ ಘೋಷಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಬಂದ್ಗೆ ಬೆಂಬಲ ಘೋಷಿಸಿಲ್ಲ.</p>.<p>ಸಿನಿಮಾ ಉದ್ಯಮ, ಐಟಿ-ಬಿಟಿ ಕಂಪನಿಯ ಉದ್ಯೋಗಿಗಳು, ವಿದ್ಯಾಸಂಸ್ಥೆಗಳು, ಅಪಾರ್ಟ್ಮೆಂಟ್ ಸಂಘ ಸಂಸ್ಥೆಗಳು, ಖಾಸಗಿ ಕಾರ್ಖಾನೆಗಳು, ಹೋಟೆಲ್ ಉದ್ದಿಮೆದಾರರು, ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ವ್ಯಕ್ತಪಡಿಸುವಂತೆ ಪ್ರತಿಭಟನಾಕಾರರು ಕೋರಿದರು.</p>.<p>ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಅಂದು ಬೆಳಿಗ್ಗೆ 11ಕ್ಕೆ ಪುರಭವನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಇದು ಸಂಘ–ಸಂಸ್ಥೆಗಳ ಬಂದ್ ಅಲ್ಲ. ಎಲ್ಲ ಜನ ಸಾಮಾನ್ಯರ ಪರವಾದ ಬಂದ್. ಕಾವೇರಿ ನೀರು ಕುಡಿಯುವ ಪ್ರತಿಯೊಬ್ಬರೂ ಬೆಂಬಲ ನೀಡುವಂತೆ ಕೋರಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ಸರ್ಕಾರದ ಬೇಜವಾಬ್ದಾರಿಯಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ. ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದರು. ಅಧಿಕಾರ ಸಿಕ್ಕಿದ ಮೇಲೆ ಮೌನ ವಹಿಸಿದ್ಧಾರೆ ಎಂದು ಕಿಡಿಕಾರಿದರು.</p>.<p>‘ತಮಿಳುನಾಡಿಗೆ ಕಾವೇರಿ ನೀರು ಹರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಅಖಂಡ ಕರ್ನಾಟಕ ಬಂದ್’ ಮಾಡಲು ಇದೇ 25ರಂದು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ರಂದು ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿವೆ.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.</p>.<p>ಬಂದ್ಗೆ ರೈತ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ನವನಿರ್ಮಾಣ ಸೇನೆ ಬೆಂಬಲ ಘೋಷಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಬಂದ್ಗೆ ಬೆಂಬಲ ಘೋಷಿಸಿಲ್ಲ.</p>.<p>ಸಿನಿಮಾ ಉದ್ಯಮ, ಐಟಿ-ಬಿಟಿ ಕಂಪನಿಯ ಉದ್ಯೋಗಿಗಳು, ವಿದ್ಯಾಸಂಸ್ಥೆಗಳು, ಅಪಾರ್ಟ್ಮೆಂಟ್ ಸಂಘ ಸಂಸ್ಥೆಗಳು, ಖಾಸಗಿ ಕಾರ್ಖಾನೆಗಳು, ಹೋಟೆಲ್ ಉದ್ದಿಮೆದಾರರು, ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ವ್ಯಕ್ತಪಡಿಸುವಂತೆ ಪ್ರತಿಭಟನಾಕಾರರು ಕೋರಿದರು.</p>.<p>ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಅಂದು ಬೆಳಿಗ್ಗೆ 11ಕ್ಕೆ ಪುರಭವನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಇದು ಸಂಘ–ಸಂಸ್ಥೆಗಳ ಬಂದ್ ಅಲ್ಲ. ಎಲ್ಲ ಜನ ಸಾಮಾನ್ಯರ ಪರವಾದ ಬಂದ್. ಕಾವೇರಿ ನೀರು ಕುಡಿಯುವ ಪ್ರತಿಯೊಬ್ಬರೂ ಬೆಂಬಲ ನೀಡುವಂತೆ ಕೋರಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ಸರ್ಕಾರದ ಬೇಜವಾಬ್ದಾರಿಯಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ. ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದರು. ಅಧಿಕಾರ ಸಿಕ್ಕಿದ ಮೇಲೆ ಮೌನ ವಹಿಸಿದ್ಧಾರೆ ಎಂದು ಕಿಡಿಕಾರಿದರು.</p>.<p>‘ತಮಿಳುನಾಡಿಗೆ ಕಾವೇರಿ ನೀರು ಹರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಅಖಂಡ ಕರ್ನಾಟಕ ಬಂದ್’ ಮಾಡಲು ಇದೇ 25ರಂದು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>