ಸಮಿತಿಯ ಮುಖ್ಯಸ್ಥ ಕುರಬೂರು ಶಾಂತಕುಮಾರ್, ‘ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೇ ಬೆಳೆಗಳು ಬಾಡುತ್ತಿವೆ. ಆದರೂ, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಅಲ್ಲಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ನೀರಿನ ವ್ಯಾಪಾರ ಮಾಡುತ್ತಿದ್ದಾರೆ’ ಎಂದು ದೂರಿದರು.