<p><strong>ವೈಟ್ಫೀಲ್ಡ್: </strong>ಮಹದೇವಪುರ ಕ್ಷೇತ್ರದ ಹಾಡೋಸಿದ್ದಾಪುರದ ಬಳಿ ಕಾವೇರಿ ಐದನೇ ಹಂತದ ನೀರು ಸರಬರಾಜು ಯೋಜನೆಯಡಿ ಜಲಮಂಡಳಿಯು ನಿರ್ಮಿಸುತ್ತಿರುವ 4 ಕೋಟಿ ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಲಿಂಬಾವಳಿ ಭೂಮಿಪೂಜೆ ನೆರವೇರಿಸಿದರು.</p>.<p>‘ನಗರದ ಹೊರವಲಯದಲ್ಲಿ ನೀರಿನ ಅಬಾವ ಹೆಚ್ಚಾಗಿರುವುದರಿಂದ ಈ ಘಟಕವು ಹೆಚ್ಚು ಪೂರಕವಾಗಲಿದೆ. ಅಲ್ಲದೆ ಸುತ್ತಮುತ್ತಲಿನ ಪ್ರದೇಶದ ನೀರಿನ ಬವಣೆಯೂ ನಿಗಲಿದೆ’ ಎಂದು ತಿಳಿಸಿದರು.</p>.<p>‘ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ನಗರದ ಹೊರವಲಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.</p>.<p>ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮನೋಹರ ರೆಡ್ಡಿ, ಆಶಾ ಸುರೇಶ್, ಮುಖಂಡರಾದ ರಾಜರೆಡ್ಡಿ, ರಾಜೇಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈಟ್ಫೀಲ್ಡ್: </strong>ಮಹದೇವಪುರ ಕ್ಷೇತ್ರದ ಹಾಡೋಸಿದ್ದಾಪುರದ ಬಳಿ ಕಾವೇರಿ ಐದನೇ ಹಂತದ ನೀರು ಸರಬರಾಜು ಯೋಜನೆಯಡಿ ಜಲಮಂಡಳಿಯು ನಿರ್ಮಿಸುತ್ತಿರುವ 4 ಕೋಟಿ ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಲಿಂಬಾವಳಿ ಭೂಮಿಪೂಜೆ ನೆರವೇರಿಸಿದರು.</p>.<p>‘ನಗರದ ಹೊರವಲಯದಲ್ಲಿ ನೀರಿನ ಅಬಾವ ಹೆಚ್ಚಾಗಿರುವುದರಿಂದ ಈ ಘಟಕವು ಹೆಚ್ಚು ಪೂರಕವಾಗಲಿದೆ. ಅಲ್ಲದೆ ಸುತ್ತಮುತ್ತಲಿನ ಪ್ರದೇಶದ ನೀರಿನ ಬವಣೆಯೂ ನಿಗಲಿದೆ’ ಎಂದು ತಿಳಿಸಿದರು.</p>.<p>‘ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ನಗರದ ಹೊರವಲಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.</p>.<p>ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮನೋಹರ ರೆಡ್ಡಿ, ಆಶಾ ಸುರೇಶ್, ಮುಖಂಡರಾದ ರಾಜರೆಡ್ಡಿ, ರಾಜೇಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>