ಸಮಿತಿಯ ರಾಜ್ಯ ಸಂಚಾಲಕ ಕುರುಬೂರು ಶಾಂತಕುಮಾರ್, ‘ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಮಂಡಳಿಯ ಅವೈಜ್ಞಾನಿಕ ಆದೇಶದಿಂದ ಕರ್ನಾಟಕದ ರೈತರಿಗೆ ಸಂಕಷ್ಟ ಎದುರಾಗಿದೆ. ಇದೇ 9 ಮತ್ತು 10ರಂದು ಸಮಿತಿಯ ನಿಯೋಗವು ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲಿದೆ. ರಾಷ್ಟ್ರಪತಿ ಭೇಟಿಗೆ ಸಮಯ ಕೇಳಲಾಗಿದ್ದು, ಅನುಮತಿ ದೊರೆತರೆ ಭೇಟಿ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.