ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ‘ಕೇವಲ ಪ್ರತಿಕ್ರಿಯಾತ್ಮಕವಾಗಿದ್ದ ಕನ್ನಡ ಹೋರಾಟವನ್ನು ನಿರಂತರ ಕ್ರಿಯಾಶೀಲತೆಯ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಚಿದಾನಂದಮೂರ್ತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಸರ್ಕಾರ ಜಾರಿಗೆ ತಂದಿರುವ ಸಮಗ್ರ ಕನ್ನಡ ಭಾಷಾ ಕಾಯ್ದೆ ಕೂಡ ಚಿದಾನಂದಮೂರ್ತಿ ಅವರ ಚಿಂತನೆಯ ಮುಂದುವರಿದ ಭಾಗವೇ ಆಗಿದೆ. ಅವರ ಕನ್ನಡಪರ ಚಿಂತನೆಯು ಕೇವಲ ಕನ್ನಡ ಭಾಷೆ ಮಾತ್ರವಲ್ಲದೆ, ರಾಜ್ಯದ ನೀರಿನ ಹಕ್ಕು, ಉದ್ಯೋಗದ ಪಾಲು, ಕನ್ನಡ ವಿಶ್ವವಿದ್ಯಾಲಯ ಮುಂತಾದ ಆಯಾಮಗಳನ್ನು ಒಳಗೊಂಡಿತ್ತು’ ಎಂದು ಸ್ಮರಿಸಿದರು.