ಆವಲಹಳ್ಳಿ ರಾಯಲ್ ಪಾರ್ಕ್ನ ನಿವಾಸಿಗಳಿಗೆ ಕಾವೇರಿ ನೀರಿನ ಮೀಟರ್ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿದ ಬಿಬಿಎಂಪಿ ಸದಸ್ಯ ಕೆ. ಸೋಮಶೇಖರ್, ‘ಕಾವೇರಿ ನೀರು ಸರಬರಾಜು ಮಾಡಲು ತಾಂತ್ರಿಕ ತೊಂದರೆ ಎದುರಾಗಿತ್ತು. ಶಾಸಕ ಎಂ.ಕೃಷ್ಣಪ್ಪ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸಮಸ್ಯೆ ಬಗೆಹರಿಸಿದ್ದಾರೆ’ ಎಂದರು.