<p><strong>ಬೆಂಗಳೂರು</strong>: ತುರ್ತು ನಿರ್ವಹಣೆ ಸಂಬಂಧ ಕೈಗೊಂಡಿದ್ದ ಕಾಮಗಾರಿಯನ್ನು ನಿಗದಿಗಿಂತ ಮೊದಲೇ ಪೂರ್ಣಗೊಳಿಸಲಾಗಿದೆ. ಹೀಗಾಗಿ ಕಾವೇರಿ ನೀರು ಸರಬರಾಜಿನಲ್ಲಿ ಆಗಿದ್ದ ವ್ಯತ್ಯಯವನ್ನು ಒಂದು ದಿನ ಮೊದಲೇ ಸರಿಪಡಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆಸಿಕೊಂಡು ಹಗಲು–ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆದಾರರಿಗೆ ಸೂಚಿಸಲಾಯಿತು. ಎರಡು ದಿನಗಳಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆಯಿಂದ ನಗರದ ಎಲ್ಲಾ ಭಾಗಗಳಲ್ಲಿ ನೀರು ಸರಬರಾಜು ಪ್ರಕ್ರಿಯೆ ಪುನರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ವಿವಿಧೆಡೆ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮೂರು ದಿನ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿಯು ಸಾರ್ವಜನಿಕರಿಗೆ ಮೊದಲೇ ಮಾಹಿತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತುರ್ತು ನಿರ್ವಹಣೆ ಸಂಬಂಧ ಕೈಗೊಂಡಿದ್ದ ಕಾಮಗಾರಿಯನ್ನು ನಿಗದಿಗಿಂತ ಮೊದಲೇ ಪೂರ್ಣಗೊಳಿಸಲಾಗಿದೆ. ಹೀಗಾಗಿ ಕಾವೇರಿ ನೀರು ಸರಬರಾಜಿನಲ್ಲಿ ಆಗಿದ್ದ ವ್ಯತ್ಯಯವನ್ನು ಒಂದು ದಿನ ಮೊದಲೇ ಸರಿಪಡಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆಸಿಕೊಂಡು ಹಗಲು–ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆದಾರರಿಗೆ ಸೂಚಿಸಲಾಯಿತು. ಎರಡು ದಿನಗಳಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆಯಿಂದ ನಗರದ ಎಲ್ಲಾ ಭಾಗಗಳಲ್ಲಿ ನೀರು ಸರಬರಾಜು ಪ್ರಕ್ರಿಯೆ ಪುನರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ವಿವಿಧೆಡೆ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮೂರು ದಿನ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿಯು ಸಾರ್ವಜನಿಕರಿಗೆ ಮೊದಲೇ ಮಾಹಿತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>