<p><strong>ಬೆಂಗಳೂರು:</strong> ಖಾಸಗಿ ಕಂಪನಿ ನೌಕರರೊಬ್ಬರಿಂದ ₹ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ ಸೇಫ್ಟಿ ಸಂಸ್ಥೆ (ಪಿಇಎಸ್ಒ) ಮಂಗಳೂರಿನ ಉಪ ಮುಖ್ಯ ಕಂಟ್ರೋಲರ್ (ಸೇಫ್ಟಿ) ಎಸ್.ಎಂ. ಮನ್ನನ್ ಅವರನ್ನು ಸಿಬಿಐ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಈ ಅಧಿಕಾರಿಗೆ ಲಂಚ ನೀಡಿದ ಆರೋಪಕ್ಕೆ ಒಳಗಾಗಿರುವ ಬೆಳಗಾವಿಯ ಸಂಘ್ವಿ ಸಿಲಿಂಡರ್ ಪ್ರೈವೇಟ್ ಲಿ. ನೌಕರ ರಿಷಬ್ ದೇಸಾಯಿ ಅವರನ್ನೂ ಬಂಧಿಸಲಾಗಿದೆ. ಬೆಳಗಾವಿ ಮೂಲದ ಸಿಲಿಂಡರ್ ಕಂಪನಿಯ ಪರವಾನಗಿ ನವೀಕರಣಕ್ಕೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ನಾಗಪುರದಲ್ಲಿರುವ ಪಿಇಎಸ್ಒ ಕೇಂದ್ರ ಕಚೇರಿಗೆ ಸಲ್ಲಿಸಲು ಅಧಿಕಾರಿ ₹ 50 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು.</p>.<p>ಆದರೆ, ಕಂಪನಿ ನೌಕರರ ಮೂಲಕ ಆರೋಪಿ ಅಧಿಕಾರಿಗೆ ಲಂಚದ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಮನ್ನನ್, ದೇಸಾಯಿ ಅವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆ ಬೀಸಿ ಬಂಧಿಸಿತು.</p>.<p>ಬಂಧಿತ ಆರೋಪಿಗಳನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಸಗಿ ಕಂಪನಿ ನೌಕರರೊಬ್ಬರಿಂದ ₹ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ ಸೇಫ್ಟಿ ಸಂಸ್ಥೆ (ಪಿಇಎಸ್ಒ) ಮಂಗಳೂರಿನ ಉಪ ಮುಖ್ಯ ಕಂಟ್ರೋಲರ್ (ಸೇಫ್ಟಿ) ಎಸ್.ಎಂ. ಮನ್ನನ್ ಅವರನ್ನು ಸಿಬಿಐ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಈ ಅಧಿಕಾರಿಗೆ ಲಂಚ ನೀಡಿದ ಆರೋಪಕ್ಕೆ ಒಳಗಾಗಿರುವ ಬೆಳಗಾವಿಯ ಸಂಘ್ವಿ ಸಿಲಿಂಡರ್ ಪ್ರೈವೇಟ್ ಲಿ. ನೌಕರ ರಿಷಬ್ ದೇಸಾಯಿ ಅವರನ್ನೂ ಬಂಧಿಸಲಾಗಿದೆ. ಬೆಳಗಾವಿ ಮೂಲದ ಸಿಲಿಂಡರ್ ಕಂಪನಿಯ ಪರವಾನಗಿ ನವೀಕರಣಕ್ಕೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ನಾಗಪುರದಲ್ಲಿರುವ ಪಿಇಎಸ್ಒ ಕೇಂದ್ರ ಕಚೇರಿಗೆ ಸಲ್ಲಿಸಲು ಅಧಿಕಾರಿ ₹ 50 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು.</p>.<p>ಆದರೆ, ಕಂಪನಿ ನೌಕರರ ಮೂಲಕ ಆರೋಪಿ ಅಧಿಕಾರಿಗೆ ಲಂಚದ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಮನ್ನನ್, ದೇಸಾಯಿ ಅವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆ ಬೀಸಿ ಬಂಧಿಸಿತು.</p>.<p>ಬಂಧಿತ ಆರೋಪಿಗಳನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>