ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಸ್ವೀಕಾರ: ಪಿಇಎಸ್‌ಒ ಅಧಿಕಾರಿ ಬಂಧನ

ಪರವಾನಗಿ ನವೀಕರಣಕ್ಕಾಗಿ ಲಂಚದ ಬೇಡಿಕೆ
Last Updated 24 ಸೆಪ್ಟೆಂಬರ್ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಕಂಪನಿ ನೌಕರರೊಬ್ಬರಿಂದ ₹ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೆಟ್ರೋಲಿಯಂ ಮತ್ತು ಎಕ್ಸ್‌ಪ್ಲೋಸಿವ್‌ ಸೇಫ್ಟಿ ಸಂಸ್ಥೆ (ಪಿಇಎಸ್ಒ) ಮಂಗಳೂರಿನ ಉಪ ಮುಖ್ಯ ಕಂಟ್ರೋಲರ್‌ (ಸೇಫ್ಟಿ) ಎಸ್‌.ಎಂ. ಮನ್ನನ್‌ ಅವರನ್ನು ಸಿಬಿಐ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಅಧಿಕಾರಿಗೆ ಲಂಚ ನೀಡಿದ ಆರೋಪಕ್ಕೆ ಒಳಗಾಗಿರುವ ಬೆಳಗಾವಿಯ ಸಂಘ್ವಿ ಸಿಲಿಂಡರ್‌ ಪ್ರೈವೇಟ್‌ ಲಿ. ನೌಕರ ರಿಷಬ್‌ ದೇಸಾಯಿ ಅವರನ್ನೂ ಬಂಧಿಸಲಾಗಿದೆ. ಬೆಳಗಾವಿ ಮೂಲದ ಸಿಲಿಂಡರ್‌ ಕಂಪನಿಯ ಪರವಾನಗಿ ನವೀಕರಣಕ್ಕೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ನಾಗಪುರದಲ್ಲಿರುವ ಪಿಇಎಸ್‌ಒ ಕೇಂದ್ರ ಕಚೇರಿಗೆ ಸಲ್ಲಿಸಲು ಅಧಿಕಾರಿ ₹ 50 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು.

ಆದರೆ, ಕಂಪನಿ ನೌಕರರ ಮೂಲಕ ಆರೋಪಿ ಅಧಿಕಾರಿಗೆ ಲಂಚದ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಮನ್ನನ್‌, ದೇಸಾಯಿ ಅವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆ ಬೀಸಿ ಬಂಧಿಸಿತು.

ಬಂಧಿತ ಆರೋಪಿಗಳನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT