<p><strong>ರಾಜರಾಜೇಶ್ವರಿನಗರ:</strong> ‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಹೆಚ್ಚಾಗಿದ್ದು, ಕಾರ್ಯಕರ್ತರು ಪಕ್ಷ ಸಂಘಟಿಸಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸ ಬೇಕು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಸೀಗೇಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ‘ಬೆವರು ಹರಿಸಿ ಅವಿರತವಾಗಿ ದುಡಿಯುವ ಕಾರ್ಯಕರ್ತರಿಂದ ಪಕ್ಷ ಉಳಿದಿದೆ. ಯಾವುದೇ ನಾಯಕರಿಂದಲ್ಲ’ ಎಂದರು.</p>.<p>‘ಸಿಬಿಐ, ಇ.ಡಿ ಮತ್ತಿತರ ಸಂಸ್ಥೆಗಳನ್ನು ಕೈಗೊಂಬೆ ಮಾಡಿಕೊಂಡು ಬಿಜೆಪಿಯವರು ಚುನಾವಣೆ ಮುಂದೂ ಡಿದ್ದಾರೆ. ರಾಜಕೀಯ ಸೇಡಿನಿಂದ ಹಲವು ನಾಯಕರನ್ನು ಹೆದರಿಸಿ ಬೆದರಿಸಲಾಗುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನಾಯಕರು ಹಲವು ಹಗರಣಗಳನ್ನು ಮಾಡುತ್ತಿದ್ದರೂ ಕೇಂದ್ರ ನಾಯಕರು ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಹೆಚ್ಚಾಗಿದ್ದು, ಕಾರ್ಯಕರ್ತರು ಪಕ್ಷ ಸಂಘಟಿಸಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸ ಬೇಕು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಸೀಗೇಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ‘ಬೆವರು ಹರಿಸಿ ಅವಿರತವಾಗಿ ದುಡಿಯುವ ಕಾರ್ಯಕರ್ತರಿಂದ ಪಕ್ಷ ಉಳಿದಿದೆ. ಯಾವುದೇ ನಾಯಕರಿಂದಲ್ಲ’ ಎಂದರು.</p>.<p>‘ಸಿಬಿಐ, ಇ.ಡಿ ಮತ್ತಿತರ ಸಂಸ್ಥೆಗಳನ್ನು ಕೈಗೊಂಬೆ ಮಾಡಿಕೊಂಡು ಬಿಜೆಪಿಯವರು ಚುನಾವಣೆ ಮುಂದೂ ಡಿದ್ದಾರೆ. ರಾಜಕೀಯ ಸೇಡಿನಿಂದ ಹಲವು ನಾಯಕರನ್ನು ಹೆದರಿಸಿ ಬೆದರಿಸಲಾಗುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನಾಯಕರು ಹಲವು ಹಗರಣಗಳನ್ನು ಮಾಡುತ್ತಿದ್ದರೂ ಕೇಂದ್ರ ನಾಯಕರು ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>