‘ಸಮಾಜದಲ್ಲಿ ವ್ಯಕ್ತಿಗಿಂತ ವ್ಯವಸ್ಥೆಯೇ ದೊಡ್ಡದು. ಇದರಲ್ಲಿ ನಂಬಿಕೆ ಹೆಚ್ಚುವ ರೀತಿಯಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸತ್ಯ ಏನೆಂದು ಹೊರಬರಲಿ. ಇನ್ನು ತನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಶಿವಕುಮಾರ್ ಹೇಳಿದ್ದಾರೆ. ಅದರಂತೆ ಅವರು ಸಹಕಾರ ನೀಡಲಿ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತು ಮಾಡಲು ಇದೊಂದು ಅವಕಾಶ. ಸಿಕ್ಕಿದ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಳ್ಳಲಿ’ ಎಂದರು.