ಬೆಂಗಳೂರು: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಸಿಗರೇಟ್ ವಿತರಕರು ಮತ್ತು ನಕಲಿ ಮಾಸ್ಕ್ ತಯಾರಿಕರಿಂದ ಲಂಚ ಪಡೆದ ಆರೋಪಕ್ಕೆ ಒಳಗಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್, ಇನ್ಸ್ಪೆಕ್ಟರ್ಗಳಾದ ಅಜಯ್ ಮತ್ತು ನಿರಂಜನ ಕುಮಾರ್ ತಲೆಮರೆಸಿಕೊಂಡಿದ್ದು, ಈ ಪ್ರಕರಣಗಳ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ವಿಚಾರಣೆಗೆ ಬರುವಂತೆ ಎರಡೆರಡು ನೋಟಿಸ್ ಜಾರಿಗೊಳಿಸಿದೆ.