ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸಿಬಿ ಪೊಲೀಸರಿಂದ ಅರುಣ್ ಬಂಧನ

Last Updated 19 ಆಗಸ್ಟ್ 2020, 20:38 IST
ಅಕ್ಷರ ಗಾತ್ರ

ಬೆಂಗಳೂರು: ಗಲಭೆ ಸಂಚಿನಲ್ಲಿ ಭಾಗಿಯಾಗಿರುವ ಆರೋಪದಡಿ ಪಾಲಿಕೆ ಸದಸ್ಯ ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್ ಮನೋಹರ್ ರಾಜ್‍ ಅವರನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸಂಪತ್ ರಾಜ್ ಅವರೊಂದಿಗೆ ಮಂಗಳವಾರ ವಿಚಾರಣೆಗೆ ಬಂದಿದ್ದ ಅರುಣ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣ ಸಂಬಂಧ ರಾತ್ರಿವರೆಗೆ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಅರುಣ್‍ನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತಮಿಳುನಾಡು ಮೂಲದ ಅರುಣ್, ಪ್ರಥಮದರ್ಜೆ ಗುತ್ತಿಗೆದಾರ. ಒಂಬತ್ತು ವರ್ಷದಿಂದ ಸಂಪತ್ ರಾಜ್ ಅವರ ಜೊತೆಯಲ್ಲಿ ಇದ್ದ. ಗಲಭೆ ದಿನ ಸ್ಥಳದಲ್ಲಿದ್ದು ಗಲಭೆಕೋರರ ಜತೆ ಮಾತನಾಡಿರುವುದಕ್ಕೆ ಕೆಲ ಪುರಾವೆಗಳು ಸಿಕ್ಕಿದ್ದವು. ಅದರ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಅಧಿಕಾರಿಗಳು ಅರುಣ್‍ನನ್ನು ವಶಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT