‘ಯುವ ಉದ್ಯಮಿಗಳಿಬ್ಬರು ನಗರದಲ್ಲಿ ಕಂಪನಿಯೊಂದನ್ನು ನಡೆಸು ತ್ತಿದ್ದರು. ತಾವು ಪಡೆದ ಸಾಲದ ವಿಚಾರವಾಗಿ ಅವರಿಬ್ಬರಿಗೆ ಸಮಸ್ಯೆ ಉಂಟಾಗಿತ್ತು. ಅವರನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ‘ನಾನು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಕಾರ್ಯದರ್ಶಿ. ನಿಮಗೆ ಸಹಾಯ ಮಾಡುತ್ತೇನೆ. ಸಾಲಗಾರರಿಗೆ ನಾನೇ ಪಾಠ ಕಲಿಸುತ್ತೇನೆ’ ಎಂದಿದ್ದ. ನಂತರ, ಕಂಪನಿಗೆ ಸಂಬಂಧಪಟ್ಟ ದಾಖಲೆಗಳನ್ನೆಲ್ಲ ತರಿಸಿಕೊಂಡು ತನ್ನ ಬಳಿ ಇಟ್ಟುಕೊಂಡಿದ್ದ. ಕೆಲ ದಿನಗಳ ನಂತರ ಸಾಲಗಾರರನ್ನು ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದ್ದ. ಹಣ ಕೇಳಿದರೆ ಜೈಲಿಗೆ ಕಳುಹಿಸುವುದಾಗಿಯೂ ಬೆದರಿಸಲಾರಂಭಿಸಿದ್ದ’ ಎಂದೂ ಪೊಲೀಸರು ಹೇಳಿದರು.