‘ಸಾರ್ವಜನಿಕರೊಬ್ಬರು ನೀಡಿದ್ದ ದೂರಿನನ್ವಯಸಿಸಿಬಿಯ ಸಂಘಟಿತ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಕೇಶವಮೂರ್ತಿ ನೇತೃತ್ವದ ತಂಡ ನಾಗರಬಾವಿಯ 2ನೇ ಹಂತದ ಮಾಳಗಾಳದಲ್ಲಿರುವ ಸಂಸ್ಥೆಯ ಕಚೇರಿ ಮೇಲೆ ಶನಿವಾರ ದಾಳಿ ನಡೆಸಿತ್ತು. ಕೆಲ ದಾಖಲೆಗಳನ್ನು ಜಪ್ತಿ ಮಾಡಿ ಆರೋಪಿ ಮಧು ಅವರನ್ನು ಬಂಧಿಸಿದೆ. ಪಾಲುದಾರರಾದ ಕುಮಾರ್, ಯಶಸ್ ಹಾಗೂ ಆಕಾಶ್ ತಲೆಮರೆಸಿಕೊಂಡಿದ್ದಾರೆ’ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಹೇಳಿದರು.