‘ರಾಜಾಜಿನಗರದ ಪಶ್ಚಿಮ ಕಾರ್ಡ್ ರಸ್ತೆ ನಿವಾಸಿ ಶ್ರೀನಿವಾಸ್ ಗೌಡ, ‘ಕರ್ನಾಟಕ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ’ ಹೆಸರಿನಲ್ಲಿ ಕಚೇರಿ ತೆರೆದು ಜನರನ್ನು ವಂಚಿಸುತ್ತಿದ್ದ. ಆತನ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು. ‘ಆರೋಪಿ ಯಾವುದೇ ಸರ್ಕಾರಿ ನೌಕರನೂ ಅಲ್ಲ. ಆದರೂ ಸರ್ಕಾರಿ ನೌಕರರ ಸಂಘದಿಂದ ನಿವೇಶನ ನೀಡುವುದಾಗಿ ಜಾಹೀರಾತಿನಲ್ಲಿ ಸುಳ್ಳು ಮಾಹಿತಿ ಪ್ರಕಟಿಸುತ್ತಿದ್ದ’ ಎಂದು ಹೇಳಿದರು.