‘ಸಾಯಿ ರಿಯಲ್ ಎಸ್ಟೇಟ್ ಕಂಪನಿ ನಡೆಸುತ್ತಿದ್ದ ಪ್ರಭಾಕರ್ ರೆಡ್ಡಿ, ಸಾರ್ವಜನಿಕರಿಗೆ ಜೀವ ಬೆದರಿಕೆವೊಡ್ಡಿ ಭೂ ಕಬಳಿಕೆ ಮಾಡುತ್ತಿದ್ದರು. ಅವರ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಪರಪ್ಪನ ಅಗ್ರಹಾರ, ಮಡಿವಾಳ, ಕೋರಮಂಗಲ, ಎಚ್ಎಸ್ಆರ್ ಲೇಔಟ್ ಮತ್ತು ಬೇಗೂರು ಠಾಣೆಯಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು’ ಎಂದು ಅಧಿಕಾರಿ ಹೇಳಿದರು.