‘ಕೊಲೆ ಪ್ರಕರಣದಲ್ಲಿ ಜುನೇದ್ ಹಾಗೂ ಆತನ ಸಹಚರರಾದ ಸೈಯದ್ ಸುಹೇಲ್ ಖಾನ್, ಜಾಹೀದ್ ತಬ್ರೇಜ್, ಸೈಯದ್ ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ, ಮಹಮ್ಮದ್ ಊಮರ್ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು. ಅವರಿಗೆ ನಾಸೀರ್ ಜೈಲಿನೊಳಗೆ ಸ್ಫೋಟಕ್ಕೆ ತರಬೇತಿ ನೀಡುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆತನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು’ ಎಂದು ಸಿಸಿಬಿ ಪೊಲೀಸರು ಹೇಳಿದರು.