ಬೆಂಗಳೂರು: ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ನಗದು, ಚಿನ್ನಾಭರಣ ದೋಚಲು ಸಂಚು ರೂಪಿಸುತ್ತಿದ್ದ ಐದು ಮಂದಿಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು ಯಲಹಂಕದ ಅಳ್ಳಾಳಸಂದ್ರ ಕೆರೆಯ ಬಳಿಯ ಅಂಬೇಡ್ಕರ್ ಕಾಲೊನಿಯಿಂದ ಬಂಧಿಸಿದ್ದಾರೆ.
ವಿದ್ಯಾರಣ್ಯಪುರದ ಕಾನ್ಸಿರಾಮ್ ನಗರದ ನಿವಾಸಿಗಳಾದ ಎಂ. ನಾಗರಾಜ (19), ಪ್ರೇಮ್ ಕುಮಾರ್ (21), ಶ್ರೇಯಸ್ (20), ನಂದನ್ (22), ನಾಗಶೆಟ್ಟಿಹಳ್ಳಿಯ ಕೆವಿನ್ (19) ಬಂಧಿತರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಆರೋಪಿಗಳ ಪೈಕಿ ಪ್ರೇಮ್ ಕುಮಾರನ ವಿರುದ್ಧ ಗಂಗಮ್ಮನಗುಡಿ ಠಾಣೆಯಲ್ಲಿ ಕೊಲೆಯತ್ನ, ಯಲಹಂಕ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದೆ. ಶ್ರೇಯಸ್ ವಿರುದ್ಧ ಕೂಡಾ ಗಂಗಮ್ಮನ ಗುಡಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅರುಣ್ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ನಂದನ್ ವಿರುದ್ಧ ಯಲಹಂಕ ಠಾಣೆಯಲ್ಲಿ ಪ್ರಕರಣವಿದೆ. ಅಲ್ಲದೆ, ಆತನ ವಿರುದ್ಧ ಗಂಗಮ್ಮನಗುಡಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವೂ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.