ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ತಲೆಮರೆಸಿಕೊಂಡಿದ್ದ ಮೂವರ ಬಂಧನ

Published 24 ಜನವರಿ 2024, 22:28 IST
Last Updated 24 ಜನವರಿ 2024, 22:28 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್‌ ಹಾಗೂ ಒಬ್ಬ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿವೇಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌ ಪಿ.ಜಾರ್ಜ್ ಅಲಿಯಾಸ್ ಮೈಕಲ್ ಜಾರ್ಜ್, ಮುತ್ತುರಾಜ್ ಹಾಗೂ ಆರ್‌.ಆರ್‌.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಲೋಕೇಶ್ ಬಂಧಿತರು.

ಮೈಕಲ್ ಜಾರ್ಜ್ ವಿರುದ್ಧ ಒಂದು ಕೊಲೆ, ಒಂದು ಡಕಾಯಿತಿ ಪ್ರಕರಣ ದಾಖಲಾಗಿದ್ದವು. ಈತ ನಾಲ್ಕು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಮುತ್ತುರಾಜ್‌ ಮೇಲೆ ಎರಡು ಕೊಲೆ, ನಾಲ್ಕು ಕೊಲೆ ಯತ್ನ, ಒಂದು ಹಲ್ಲೆ, ಎರಡು ಎನ್‌ಡಿಪಿಎಸ್‌, ಮೂರು ದರೋಡೆ, ಒಂದು ದರೋಡೆಗೆ ಸಿದ್ಧತೆ ನಡೆಸಿದ ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಎಂಟು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಈತ ಆರು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಲೋಕೇಶ್ ವಿರುದ್ಧ ಪೀಣ್ಯ, ಶ್ರೀರಾಂಪುರ, ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT