‘ಕೆಲ ತಿಂಗಳ ಹಿಂದೆ ಬೆಳ್ಳಂದೂರಿನಲ್ಲಿ ಮುನ್ನಾಕುಮಾರ್ ಎಂಬಾತನ ಕೊಲೆಯಾಗಿತ್ತು. ಆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಳನಿ, ಅಶೋಕನಗರ ಠಾಣೆ ವ್ಯಾಪ್ತಿಯ ಹೊಸೂರು ರಸ್ತೆಯ ಸ್ಮಶಾನದ ಬಳಿ ಅಡಗಿರುವ ಮಾಹಿತಿ ಲಭಿಸಿತ್ತು. ಆತನ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಆತ ಅಲ್ಲಿ ಇರುವುದು ಖಾತರಿಯಾದ ನಂತರ ಸಿಸಿಬಿ ಎಸಿಪಿ ಪರಮೇಶ್ವರ್ ನೇತೃತ್ವದ ತಂಡವು ಮಂಗಳವಾರ ತಡರಾತ್ರಿ ಸ್ಥಳಕ್ಕೆ ಹೋಗಿ ಆತನನ್ನು ಸುತ್ತುವರಿದಿತ್ತು. ಪೊಲೀಸರನ್ನು ಕಂಡೊಡನೆ ಆತ ಓಡಿಹೋಗಲು ಯತ್ನಿಸಿದ್ದ. ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಆತನ ಬೆನ್ನಟ್ಟಿದ್ದ ಇನ್ಸ್ಪೆಕ್ಟರ್ ಹರೀಶ್ಕುಮಾರ್ ಅವರ ಎಡಗೈಗೆ ಡ್ರ್ಯಾಗರ್ನಿಂದ ತಿವಿದಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.