<p><strong>ಬೆಂಗಳೂರು: </strong>ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪೆಡ್ಲರ್ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>‘ಆರೋಪಿಯು ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ. ಈತನಿಂದ 5 ಕೆ.ಜಿ.ಗಾಂಜಾ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹5 ಲಕ್ಷ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪೆಡ್ಲರ್ ತಲೆಮರೆಸಿಕೊಂಡಿದ್ದಾನೆ. ಆತ ಆಂಧ್ರಪ್ರದೇಶದವನು. ಅವನಿಂದಲೇ ಬಂಧಿತ ಆರೋಪಿ ಮಾದಕ ವಸ್ತು ಖರೀದಿಸುತ್ತಿದ್ದ. ಅದನ್ನು 20 ಗ್ರಾಮ್ಗಳಂತೆ ವಿಂಗಡಿಸಿ ಪೊಟ್ಟಣಗಳಲ್ಲಿ ತುಂಬುತ್ತಿದ್ದ. ಪರಿಚಿತರು, ಕಾಲೇಜು ವಿದ್ಯಾರ್ಥಿಗಳು, ನಗರದಲ್ಲಿ ನೆಲೆಸಿರುವ ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ. ಪ್ರತಿ ಪೊಟ್ಟಣಕ್ಕೆ ₹1,500ರಿಂದ ₹2 ಸಾವಿರದವರೆಗೆ ದರ ನಿಗದಿ ಮಾಡುತ್ತಿದ್ದ. ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪೆಡ್ಲರ್ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>‘ಆರೋಪಿಯು ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ. ಈತನಿಂದ 5 ಕೆ.ಜಿ.ಗಾಂಜಾ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹5 ಲಕ್ಷ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪೆಡ್ಲರ್ ತಲೆಮರೆಸಿಕೊಂಡಿದ್ದಾನೆ. ಆತ ಆಂಧ್ರಪ್ರದೇಶದವನು. ಅವನಿಂದಲೇ ಬಂಧಿತ ಆರೋಪಿ ಮಾದಕ ವಸ್ತು ಖರೀದಿಸುತ್ತಿದ್ದ. ಅದನ್ನು 20 ಗ್ರಾಮ್ಗಳಂತೆ ವಿಂಗಡಿಸಿ ಪೊಟ್ಟಣಗಳಲ್ಲಿ ತುಂಬುತ್ತಿದ್ದ. ಪರಿಚಿತರು, ಕಾಲೇಜು ವಿದ್ಯಾರ್ಥಿಗಳು, ನಗರದಲ್ಲಿ ನೆಲೆಸಿರುವ ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ. ಪ್ರತಿ ಪೊಟ್ಟಣಕ್ಕೆ ₹1,500ರಿಂದ ₹2 ಸಾವಿರದವರೆಗೆ ದರ ನಿಗದಿ ಮಾಡುತ್ತಿದ್ದ. ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>