ಆರೋಪಿಗಳ ಪೈಕಿ ಅಮರ್ನಾಥ್ ವಿರುದ್ಧ ಸಂಜಯನಗರ ಮತ್ತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರಾಬರಿ ಪ್ರಕರಣ, ರಾಜಗೋಪಾಲನಗರ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದೆ. ಶಿವರಾಜ್ ವಿರುದ್ಧ ತಾವರೆಕೆರೆ ಠಾಣೆಯಲ್ಲಿ ಕೊಲೆ ಪ್ರಕರಣ, ಕೊಡಿಗೇಹಳ್ಳಿ ಠಾಣೆಯಲ್ಲಿ ರಾಬರಿ ಪ್ರಕರಣ ಮತ್ತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದರೋಡಯತ್ನ ಪ್ರಕರಣ ದಾಖಲಾಗಿದೆ.