ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆಗೆ ಸಂಚು: ನಾಲ್ವರ ಬಂಧನ

ಸಿಸಿಬಿ ಪೊಲೀಸರಿಂದ ಕಾರ್ಯಾಚರಣೆ
Last Updated 27 ಮೇ 2020, 8:14 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಬಿಇಎಲ್‌ ಎರಡನೇ ಹಂತದ ಭರತ್‌ ನಗರದ ಪಾರ್ಕ್‌ ಬಳಿಯಿಂದ ಕೇಂದ್ರ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.

ರಾಜಗೋಪಾಲನಗರದ ನಿವಾಸಿಗಳಾದ ಅಮರ್‌ನಾಥ್‌ (31), ಶಿವರಾಜ್‌ (32), ಕೆ.ಪಿ. ಅಗ್ರಹಾರದ ಶಾಂತರಾಜು (27) ಮತ್ತು ಶ್ರೀನಿವಾಸ ಬಂಧಿತರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಅಮರ್‌ನಾಥ್‌ ವಿರುದ್ಧ ಸಂಜಯನಗರ ಮತ್ತು ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ರಾಬರಿ ಪ್ರಕರಣ, ರಾಜಗೋಪಾಲನಗರ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದೆ. ಶಿವರಾಜ್ ವಿರುದ್ಧ ತಾವರೆಕೆರೆ ಠಾಣೆಯಲ್ಲಿ ಕೊಲೆ ಪ್ರಕರಣ, ಕೊಡಿಗೇಹಳ್ಳಿ ಠಾಣೆಯಲ್ಲಿ ರಾಬರಿ ಪ್ರಕರಣ ಮತ್ತು ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ದರೋಡಯತ್ನ ಪ್ರಕರಣ ದಾಖಲಾಗಿದೆ.

‘ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ಹಲವು ಬಾರಿ ವಿವಿಧ ನ್ಯಾಯಾಲಯಗಳು ವಾರಂಟ್‌ ಜಾರಿ ಮಾಡಿವೆ. ಆದರೆ, ಕೈಗೆ ಸಿಗದೆ ತಲೆರೆಸಿಕೊಂಡು ಓಡಾಡುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT