ಆರೋಪಿಗಳಾದ ಸೈಯದ್ ತಬ್ರೇಜ್ ಪಾಷಾ, ಆಬೀದ್ ಆಜಂ, ಮಹಮ್ಮದ್ ಸದ್ದಾಂ 6 ವರ್ಷಗಳಿಂದ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ವೇಳೆ ಬೀಗ ಹಾಕಿದ ಮನೆ ಗುರುತಿಸಿ ಬಾಗಿಲು ಮುರಿದು ಮೌಲ್ಯಯುತ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದರು. ಸಿಟಿ ಮಾರುಕಟ್ಟೆ, ಡಿಜೆ ಹಳ್ಳಿ, ಹಾಸನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳವು ನಡೆಸಿ ಜೈಲಿಗೆ ಹೋಗಿದ್ದರು. ಜೈಲಿನಿಂದ ಹೊರಬಂದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಸಿಸಿಬಿ ಪೊಲೀಸ್ ಮೂಲಗಳು ತಿಳಿಸಿವೆ.