<p><strong>ಬೆಂಗಳೂರು: </strong>ಡ್ರಗ್ಸ್ ಮಾರಾಟ ಪ್ರಕರಣ ಸಂಬಂಧ ಬಂಧಿಸಲಾಗಿರುವ ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಹಾವೇರಿಯ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರನ್ನು ವಿಚಾರಣೆಗಾಗಿ ನಗರದ ಸಿಸಿಬಿ ಪೊಲೀಸರು 9 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.</p>.<p>ವಿದೇಶದಿಂದ ಅಂಚೆ ಕಚೇರಿಗೆ ಪಾರ್ಸೆಲ್ನಲ್ಲಿ ಬಂದಿದ್ದ 500 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದ ಕೆಂಪೇಗೌಡ ಠಾಣೆ ಪೊಲೀಸರು, ಸುಜಯ್ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ್ದ ಮಾಹಿತಿಯಂತೆ ಸ್ನೇಹಿತರಾದ ಹೇಮಂತ್ ಹಾಗೂ ಸುನೇಶ್ನನ್ನು ಗೋವಾದಲ್ಲಿ ಸೆರೆಹಿಡಿಯಲಾಗಿತ್ತು.</p>.<p>ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ದರ್ಶನ್ ಲಮಾಣಿಯನ್ನು ಬಂಧಿಸಿ, ವಿಚಾರಣೆಗಾಗಿ ಕೆಂಪೇಗೌಡ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು.</p>.<p>ಇದರ ನಡುವೆಯೇ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ, ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿ ಪರಿಷ್ಕರಿಸಿದ ನ್ಯಾಯಾಲಯ, ನಾಲ್ವರು ಆರೋಪಿಗಳನ್ನು ಮುಂದಿನ 9 ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿದೆ.</p>.<p>ದರ್ಶನ್ ಭಾಗಿ ಪುರಾವೆ ಸಂಗ್ರಹ; ‘ಆರೋಪಿಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ಸದಾಶಿವನಗರ ಠಾಣೆ ಹೆಡ್ ಕಾನ್ಸ್ಟೆಬಲ್ ಪ್ರಭಾಕರ್ ಎಂಬಾತನನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ದರ್ಶನ್ ಭಾಗಿ ಬಗ್ಗೆ ಪುರಾವೆ ಸಂಗ್ರಹಿಸುವ ಕೆಲಸ ಆರಂಭವಾಗಿದೆ. ದರ್ಶನ್ ಹಾಗೂ ಇತರೆ ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದ ನಂತರವೇ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡ್ರಗ್ಸ್ ಮಾರಾಟ ಪ್ರಕರಣ ಸಂಬಂಧ ಬಂಧಿಸಲಾಗಿರುವ ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಹಾವೇರಿಯ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಹಾಗೂ ಆತನ ಸ್ನೇಹಿತರನ್ನು ವಿಚಾರಣೆಗಾಗಿ ನಗರದ ಸಿಸಿಬಿ ಪೊಲೀಸರು 9 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.</p>.<p>ವಿದೇಶದಿಂದ ಅಂಚೆ ಕಚೇರಿಗೆ ಪಾರ್ಸೆಲ್ನಲ್ಲಿ ಬಂದಿದ್ದ 500 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದ ಕೆಂಪೇಗೌಡ ಠಾಣೆ ಪೊಲೀಸರು, ಸುಜಯ್ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ್ದ ಮಾಹಿತಿಯಂತೆ ಸ್ನೇಹಿತರಾದ ಹೇಮಂತ್ ಹಾಗೂ ಸುನೇಶ್ನನ್ನು ಗೋವಾದಲ್ಲಿ ಸೆರೆಹಿಡಿಯಲಾಗಿತ್ತು.</p>.<p>ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ದರ್ಶನ್ ಲಮಾಣಿಯನ್ನು ಬಂಧಿಸಿ, ವಿಚಾರಣೆಗಾಗಿ ಕೆಂಪೇಗೌಡ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು.</p>.<p>ಇದರ ನಡುವೆಯೇ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ, ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿ ಪರಿಷ್ಕರಿಸಿದ ನ್ಯಾಯಾಲಯ, ನಾಲ್ವರು ಆರೋಪಿಗಳನ್ನು ಮುಂದಿನ 9 ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿದೆ.</p>.<p>ದರ್ಶನ್ ಭಾಗಿ ಪುರಾವೆ ಸಂಗ್ರಹ; ‘ಆರೋಪಿಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ಸದಾಶಿವನಗರ ಠಾಣೆ ಹೆಡ್ ಕಾನ್ಸ್ಟೆಬಲ್ ಪ್ರಭಾಕರ್ ಎಂಬಾತನನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ದರ್ಶನ್ ಭಾಗಿ ಬಗ್ಗೆ ಪುರಾವೆ ಸಂಗ್ರಹಿಸುವ ಕೆಲಸ ಆರಂಭವಾಗಿದೆ. ದರ್ಶನ್ ಹಾಗೂ ಇತರೆ ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದ ನಂತರವೇ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>