ಪರಪ್ಪನ ಅಗ್ರಹಾರ ಜೈಲಿಗೆ ಎಷ್ಟೇ ಭದ್ರತೆ ಒದಗಿಸಿದರೂ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳು ಚಾಣಾಕ್ಷತನದಿಂದ ಅಪರಾಧ ಕೃತ್ಯಗಳಲ್ಲಿ ಪರೋಕ್ಷವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರು ಆಗಾಗ ದಾಳಿ ನಡೆಸುತ್ತಾರೆ. ಪ್ರತಿ ಬಾರಿ ಮಾರಕಾಸ್ತ್ರಗಳು, ಮೊಬೈಲ್ಗಳು, ಮಾದಕ ದ್ರವ್ಯಗಳು ಪತ್ತೆಯಾಗುತ್ತಿವೆ.