‘ಮಲ್ಲೇಶ್ವರ ಬಟ್ಟೆ ವ್ಯಾಪಾರಿ ಸುನೀಲ್ಕುಮಾರ್ ಎಂಬುವರು 2017ರಲ್ಲಿ ನಾಗರಾಜ್ ಶೆಟ್ಟಿ ಬಳಿ ₹ 5 ಲಕ್ಷ ಸಾಲ ಪಡೆದಿದ್ದರು. ನಿಗದಿತ ಸಮಯಕ್ಕೆ ಅದನ್ನು ಮರು ಪಾವತಿ ಮಾಡಿದ್ದರು. ಅಷ್ಟಾದರೂ ಆರೋಪಿ, ಮತ್ತಷ್ಟು ಹಣ ನೀಡುವಂತೆ ಪೀಡಿಸಲಾರಂಭಿಸಿದ್ದರು. ಬೇಸತ್ತ ಸುನೀಲ್, ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು. ಅದರ ತನಿಖೆಯನ್ನು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸಿಸಿಬಿಗೆ ವರ್ಗಾಯಿಸಿದ್ದರು’ ಎಂದೂ ಹೇಳಿದರು.