ಈ ಕುರಿತು ಪ್ರತಿಕ್ರಿಯಿಸಿರುವ ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ,‘ಆನ್ಲೈನ್ ಆ್ಯಪ್ಗಳ ಮುಖಾಂತರ ಜನರಿಗೆ ಹೆಚ್ಚು ಬಡ್ಡಿದರದಲ್ಲಿಅಕ್ರಮವಾಗಿ ಸಾಲ ನೀಡಲಾಗುತ್ತಿದೆ. ಬಳಿಕ ಸಾಲ ಮರುಪಾವತಿಸುವಂತೆ ಜನರಿಗೆ ಕಿರುಕುಳ ಮತ್ತು ಜೀವ ಬೆದರಿಕೆಗಳನ್ನು ಹಾಕಲಾಗುತ್ತಿದೆ. ಸಂತ್ರಸ್ತರ ಮೊಬೈಲ್ ಸಂಖ್ಯೆ, ಫೊಟೊಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.