<p><strong>ಬೆಂಗಳೂರು:</strong> ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಕಾಂಗ್ರೆಸ್ ಮುಖಂಡ ಆರ್. ಸಂಪತ್ ರಾಜ್ ಪತ್ತೆಗಾಗಿ ಸಿಸಿಬಿಯ ವಿಶೇಷ ತಂಡಗಳು ಹುಡುಕಾಟ ನಡೆಸಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.</p>.<p>ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾಗಿರುವ ಸಂಪತ್ ರಾಜ್, ಕೊರೊನಾ ಸೋಂಕು ತಗುಲಿದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅ. 30ರಂದು ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿ ಪರಾರಿಯಾಗಿದ್ದಾರೆ.</p>.<p>‘ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಂಪತ್ರಾಜ್ ವಿರುದ್ಧ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಕೊರೊನಾ ಸೋಂಕು ತಗುಲಿದ ಕಾರಣ ನೀಡಿದ್ದಕ್ಕಾಗಿ, ಅವರನ್ನ ಬಂಧಿಸಿರಲಿಲ್ಲ. ಆದರೆ, ಅವರು ಏಕಾಏಕಿ ಆಸ್ಪತ್ರೆಯಿಂದ ಪರಾರಿಯಾಗಿದ್ದನ್ನು ಗಂಭೀರವಾಗಿ ಪರಿಗಣಿಸಲಾಗಿದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆಸ್ಪತ್ರೆ ಆಡಳಿತ ಮಂಡಳಿಗೂ ನೋಟಿಸ್ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪರಾರಿಯಾಗಿರುವ ಸಂಪತ್ರಾಜ್, ಸಂಬಂಧಿಕರು ಹಾಗೂ ಸ್ನೇಹಿತರ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಇದೆ. ಆ ಬಗ್ಗೆಯೂ ಪ್ರತ್ಯೇಕ ತಂಡವೊಂದು ತನಿಖೆ ಮುಂದುವರಿಸಿದೆ’ ಎಂದೂ ತಿಳಿಸಿದರು.</p>.<p class="Subhead">ಹೊಸ ಸಿಮ್ಕಾರ್ಡ್ ಬಳಕೆ ಶಂಕೆ: ‘ಆರೋಪಿ ಸಂಪತ್ರಾಜ್, ಹೊಸ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವ ಶಂಕೆ ಇದೆ. ಆ ಸಂಖ್ಯೆ ಯಾವುದು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.</p>.<p>‘ಬೆಂಗಳೂರು ಅಥವಾ ನೆರೆ ಜಿಲ್ಲೆಗಳಲ್ಲಿ ಸಂಪತ್ರಾಜ್ ತಲೆಮರೆಸಿಕೊಂಡಿರುವ ಮಾಹಿತಿ ಇದೆ. ಹೀಗಾಗಿ, ವಿಶೇಷ ತಂಡಗಳು ಹಲವೆಡೆ ಸಂಚರಿಸುತ್ತಿದ್ದು, ಸದ್ಯದಲ್ಲೇ ಸಂಪತ್ ರಾಜ್ ಅವರನ್ನು ಬಂಧಿಸಲಾಗುವುದು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಕಾಂಗ್ರೆಸ್ ಮುಖಂಡ ಆರ್. ಸಂಪತ್ ರಾಜ್ ಪತ್ತೆಗಾಗಿ ಸಿಸಿಬಿಯ ವಿಶೇಷ ತಂಡಗಳು ಹುಡುಕಾಟ ನಡೆಸಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.</p>.<p>ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾಗಿರುವ ಸಂಪತ್ ರಾಜ್, ಕೊರೊನಾ ಸೋಂಕು ತಗುಲಿದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅ. 30ರಂದು ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿ ಪರಾರಿಯಾಗಿದ್ದಾರೆ.</p>.<p>‘ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಂಪತ್ರಾಜ್ ವಿರುದ್ಧ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಕೊರೊನಾ ಸೋಂಕು ತಗುಲಿದ ಕಾರಣ ನೀಡಿದ್ದಕ್ಕಾಗಿ, ಅವರನ್ನ ಬಂಧಿಸಿರಲಿಲ್ಲ. ಆದರೆ, ಅವರು ಏಕಾಏಕಿ ಆಸ್ಪತ್ರೆಯಿಂದ ಪರಾರಿಯಾಗಿದ್ದನ್ನು ಗಂಭೀರವಾಗಿ ಪರಿಗಣಿಸಲಾಗಿದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆಸ್ಪತ್ರೆ ಆಡಳಿತ ಮಂಡಳಿಗೂ ನೋಟಿಸ್ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪರಾರಿಯಾಗಿರುವ ಸಂಪತ್ರಾಜ್, ಸಂಬಂಧಿಕರು ಹಾಗೂ ಸ್ನೇಹಿತರ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಇದೆ. ಆ ಬಗ್ಗೆಯೂ ಪ್ರತ್ಯೇಕ ತಂಡವೊಂದು ತನಿಖೆ ಮುಂದುವರಿಸಿದೆ’ ಎಂದೂ ತಿಳಿಸಿದರು.</p>.<p class="Subhead">ಹೊಸ ಸಿಮ್ಕಾರ್ಡ್ ಬಳಕೆ ಶಂಕೆ: ‘ಆರೋಪಿ ಸಂಪತ್ರಾಜ್, ಹೊಸ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವ ಶಂಕೆ ಇದೆ. ಆ ಸಂಖ್ಯೆ ಯಾವುದು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.</p>.<p>‘ಬೆಂಗಳೂರು ಅಥವಾ ನೆರೆ ಜಿಲ್ಲೆಗಳಲ್ಲಿ ಸಂಪತ್ರಾಜ್ ತಲೆಮರೆಸಿಕೊಂಡಿರುವ ಮಾಹಿತಿ ಇದೆ. ಹೀಗಾಗಿ, ವಿಶೇಷ ತಂಡಗಳು ಹಲವೆಡೆ ಸಂಚರಿಸುತ್ತಿದ್ದು, ಸದ್ಯದಲ್ಲೇ ಸಂಪತ್ ರಾಜ್ ಅವರನ್ನು ಬಂಧಿಸಲಾಗುವುದು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>