‘ರೌಡಿ ಸೈಕಲ್ ರವಿ ಸಹಚರನಾಗಿರುವ ರಘು ವಿರುದ್ಧ 20 ಪ್ರಕರಣಗಳು ದಾಖಲಾಗಿವೆ. ಹನುಮಂತನಗರ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಜೊತೆಗೆ, ಈತ ಹಲವು ದಿನಗಳಿಂದ ಆಂಧ್ರಪ್ರದೇಶದಲ್ಲಿ ನೆಲೆಸಿದ್ದಾನೆ. ಈತನನ್ನು ಕೊಲೆ ಮಾಡಲು ಎದುರಾಳಿ ತಂಡದವರು ಸಂಚು ರೂಪಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ರಘುನನ್ನು ಕಚೇರಿಗೆ ಕರೆಸಿ ಎಚ್ಚರಿಕೆ ನೀಡಲಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.