‘ಆಕಾಶ್ ಅವರು ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಪತ್ನಿ ವಂದನಾ, ಅವರ ತಂದೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಟಿ.ಆರ್. ಸುರೇಶ್, ಗಾಯತ್ರಿ, ಜಗದೀಶ್ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹೆಬ್ಬಗೋಡಿ ಠಾಣೆಯ ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಬೆಂಗಳೂರು ಸೈಬರ್ ಕ್ರೈಂ ಠಾಣೆ ಮೂಲಗಳು ಹೇಳಿವೆ.