ಬೆಂಗಳೂರು: ವಿಜಯ ನಗರದ ಮೆಟ್ರೊ ನಿಲ್ದಾಣದ ಪಕ್ಕದಲ್ಲಿರುವ ಮುಖ್ಯ ಬಸ್ ನಿಲ್ದಾಣದ ನೂತನ ಪದಾಚಾರಿ ಮಾರ್ಗದಲ್ಲಿರುವ ಮರಗಳ ಬುಡಕ್ಕೆ ಹಾಕಲಾಗಿದ್ದ ಕಾಂಕ್ರೀಟ್, ಪೇವರ್ಸ್ ಅನ್ನು ಬಿಬಿಎಂಪಿಯ ರಸ್ತೆ ಮೂಲ ಸೌಕರ್ಯದ ಕಾರ್ಯಪಾಲಕ ಎಂಜಿನಿಯರ್ ಸಾವಿತ್ರಿ ಅವರ ಸೂಚನೆಯ ಮೇರೆಗೆ ಸಿಬ್ಬಂದಿ ಬುಧವಾರ ತೆರವುಗೊಳಿಸಿದರು.