ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಗಳ ಬುಡಕ್ಕೆ ಹಾಕಿದ್ದ ಕಾಂಕ್ರೀಟ್‌ ತೆರವು

Last Updated 14 ಡಿಸೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯ ನಗರದ ಮೆಟ್ರೊ ನಿಲ್ದಾಣದ ಪಕ್ಕದಲ್ಲಿರುವ ಮುಖ್ಯ ಬಸ್‌ ನಿಲ್ದಾಣದ ನೂತನ ಪದಾಚಾರಿ ಮಾರ್ಗದಲ್ಲಿರುವ ಮರಗಳ ಬುಡಕ್ಕೆ ಹಾಕಲಾಗಿದ್ದ ಕಾಂಕ್ರೀಟ್‌, ಪೇವರ್ಸ್‌ ಅನ್ನು ಬಿಬಿಎಂಪಿಯ ರಸ್ತೆ ಮೂಲ ಸೌಕರ್ಯದ ಕಾರ್ಯಪಾಲಕ ಎಂಜಿನಿಯರ್‌ ಸಾವಿತ್ರಿ ಅವರ ಸೂಚನೆಯ ಮೇರೆಗೆ ಸಿಬ್ಬಂದಿ ಬುಧವಾರ ತೆರವುಗೊಳಿಸಿದರು.

ಇಲ್ಲಿರುವ ಸುಮಾರು 8–10 ಮರಗಳ ಬುಡಕ್ಕೆ ಕಾಂಕ್ರೀಟ್‌ ಹಾಕಿ ಮುಚ್ಚಲಾಗಿತ್ತು. ಅದರ ಮೇಲೆ ಪೇವರ್ಸ್‌ ಅಳವಡಿಸುವ ಕಾಮಗಾರಿ ನಡೆಯುತ್ತಿತ್ತು.

ಈ ಕುರಿತು ‘ಪ್ರಜಾವಾಣಿ’ ಬುಧವಾರ ‘ಬೀದಿ ಬದಿ ಮರಗಳ ಬುಡಕ್ಕೆ ಕಾಂಕ್ರೀಟ್‌ ಕುತ್ತು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT