<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರವು ಜಾತಿಗಣತಿಯ ಜತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸ್ಥಿತಿಯ ಸಮೀಕ್ಷೆಯನ್ನೂ ನಡೆಸಬೇಕು’ ಎಂದು ಪ್ರೊ.ರವಿವರ್ಮಕುಮಾರ್ ಅವರು ಒತ್ತಾಯಿಸಿದರು.</p>.<p>ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಸಮೀಕ್ಷೆಗೆ ಕರ್ನಾಟಕವು ಈಗಾಗಲೇ ಮುನ್ನುಡಿ ಬರೆದಿದೆ. ಅದನ್ನೇ ಮಾದರಿಯಾಗಿ ಇರಿಸಿಕೊಂಡು ಕೇಂದ್ರವೂ ಸಾಮಾಜಿಕ ಸಮೀಕ್ಷೆ ನಡೆಸಬೇಕು’ ಎಂದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿಗೆ ಸುಪ್ರೀಂ ಕೋರ್ಟ್ ಶೇ 50ರ ಮಿತಿ ಹೇರಿದೆ. ಈ ಮಿತಿಯನ್ನು ಹೆಚ್ಚಿಸಿ ಎಂದು ಕೋರಿದಾಗಲೆಲ್ಲಾ ಸುಪ್ರೀಂ ಕೋರ್ಟ್, ವೈಜ್ಞಾನಿಕವಾಗಿ ಸಂಗ್ರಹಿಸಿದ ದತ್ತಾಂಶ ನೀಡಿ ಎಂದು ಕೇಳುತ್ತಿತ್ತು. ಜಾತಿಗಣತಿ ಜತೆಗೆ ಸಾಮಾಜಿಕ ಸಮೀಕ್ಷೆಯನ್ನೂ ನಡೆಸಿದರೆ, ಈ ಸಮಸ್ಯೆ ಬಗೆಹರಿಯಲಿದೆ’ ಎಂದರು.</p>.<p>‘ಜಾತಿಗಣತಿ ಮತ್ತು ಸಾಮಾಜಿಕ ಸಮೀಕ್ಷೆಯ ದತ್ತಾಂಶಗಳನ್ನು ಇರಿಸಿಕೊಂಡು ಮೀಸಲಾತಿಗೆ ಇರುವ ಶೇ 50ರ ಮಿತಿಯನ್ನು ಹೆಚ್ಚಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಕಾಲಮಿತಿಯಲ್ಲಿ ಗಣತಿ ನಡೆಸಿ, ಮುಂದಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ‘ರಾಜ್ಯದಲ್ಲಿ ಕಾಂತರಾಜು ಆಯೋಗ ಮತ್ತು ಜಯಪ್ರಕಾಶ ಹೆಗ್ಡೆ ಆಯೋಗದ ವರದಿಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಅದರಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಬೇಕು. ವರದಿಯ ಶಿಫಾರಸುಗಳನ್ನು ಶೀಘ್ರವೇ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದಾದ್ಯಂತ ಜಾತಿಗಣತಿ ನಡೆಸಬೇಕು ಎಂದು ಕಾಂಗ್ರೆಸ್ನ ರಾಹುಲ್ ಗಾಂಧಿ ಅವರು ಒತ್ತಾಯಿಸುತ್ತಲೇ ಇದ್ದರು. ಕೇಂದ್ರ ಸರ್ಕಾರ ಈಗ ಆ ಕೆಲಸಕ್ಕೆ ಮುಂದಾಗಿದೆ. ಜಾತಿಗಣತಿಯನ್ನು ವಿರೋಧಿಸುತ್ತಿದ್ದ ಬಿಜೆಪಿ, ಈಗ ಅದರ ಮಹತ್ವವನ್ನು ಅರ್ಥಮಾಡಿಕೊಂಡಿದೆ ಎಂದು ಭಾವಿಸಿದ್ದೇವೆ’ ಎಂದರು.</p>.<p>ಒಕ್ಕೂಟದ ಪ್ರಮುಖರಾದ ಮಾವಳ್ಳಿ ಶಂಕರ್, ಬಿ.ಟಿ. ಲಲಿತಾನಾಯಕ್, ಅನಂತ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರವು ಜಾತಿಗಣತಿಯ ಜತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸ್ಥಿತಿಯ ಸಮೀಕ್ಷೆಯನ್ನೂ ನಡೆಸಬೇಕು’ ಎಂದು ಪ್ರೊ.ರವಿವರ್ಮಕುಮಾರ್ ಅವರು ಒತ್ತಾಯಿಸಿದರು.</p>.<p>ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಸಮೀಕ್ಷೆಗೆ ಕರ್ನಾಟಕವು ಈಗಾಗಲೇ ಮುನ್ನುಡಿ ಬರೆದಿದೆ. ಅದನ್ನೇ ಮಾದರಿಯಾಗಿ ಇರಿಸಿಕೊಂಡು ಕೇಂದ್ರವೂ ಸಾಮಾಜಿಕ ಸಮೀಕ್ಷೆ ನಡೆಸಬೇಕು’ ಎಂದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿಗೆ ಸುಪ್ರೀಂ ಕೋರ್ಟ್ ಶೇ 50ರ ಮಿತಿ ಹೇರಿದೆ. ಈ ಮಿತಿಯನ್ನು ಹೆಚ್ಚಿಸಿ ಎಂದು ಕೋರಿದಾಗಲೆಲ್ಲಾ ಸುಪ್ರೀಂ ಕೋರ್ಟ್, ವೈಜ್ಞಾನಿಕವಾಗಿ ಸಂಗ್ರಹಿಸಿದ ದತ್ತಾಂಶ ನೀಡಿ ಎಂದು ಕೇಳುತ್ತಿತ್ತು. ಜಾತಿಗಣತಿ ಜತೆಗೆ ಸಾಮಾಜಿಕ ಸಮೀಕ್ಷೆಯನ್ನೂ ನಡೆಸಿದರೆ, ಈ ಸಮಸ್ಯೆ ಬಗೆಹರಿಯಲಿದೆ’ ಎಂದರು.</p>.<p>‘ಜಾತಿಗಣತಿ ಮತ್ತು ಸಾಮಾಜಿಕ ಸಮೀಕ್ಷೆಯ ದತ್ತಾಂಶಗಳನ್ನು ಇರಿಸಿಕೊಂಡು ಮೀಸಲಾತಿಗೆ ಇರುವ ಶೇ 50ರ ಮಿತಿಯನ್ನು ಹೆಚ್ಚಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಕಾಲಮಿತಿಯಲ್ಲಿ ಗಣತಿ ನಡೆಸಿ, ಮುಂದಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ‘ರಾಜ್ಯದಲ್ಲಿ ಕಾಂತರಾಜು ಆಯೋಗ ಮತ್ತು ಜಯಪ್ರಕಾಶ ಹೆಗ್ಡೆ ಆಯೋಗದ ವರದಿಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಅದರಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಬೇಕು. ವರದಿಯ ಶಿಫಾರಸುಗಳನ್ನು ಶೀಘ್ರವೇ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದಾದ್ಯಂತ ಜಾತಿಗಣತಿ ನಡೆಸಬೇಕು ಎಂದು ಕಾಂಗ್ರೆಸ್ನ ರಾಹುಲ್ ಗಾಂಧಿ ಅವರು ಒತ್ತಾಯಿಸುತ್ತಲೇ ಇದ್ದರು. ಕೇಂದ್ರ ಸರ್ಕಾರ ಈಗ ಆ ಕೆಲಸಕ್ಕೆ ಮುಂದಾಗಿದೆ. ಜಾತಿಗಣತಿಯನ್ನು ವಿರೋಧಿಸುತ್ತಿದ್ದ ಬಿಜೆಪಿ, ಈಗ ಅದರ ಮಹತ್ವವನ್ನು ಅರ್ಥಮಾಡಿಕೊಂಡಿದೆ ಎಂದು ಭಾವಿಸಿದ್ದೇವೆ’ ಎಂದರು.</p>.<p>ಒಕ್ಕೂಟದ ಪ್ರಮುಖರಾದ ಮಾವಳ್ಳಿ ಶಂಕರ್, ಬಿ.ಟಿ. ಲಲಿತಾನಾಯಕ್, ಅನಂತ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>