ಇಲ್ಲಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಗೆ(ಐಐಎಚ್ಆರ್) ಭಾನುವಾರ ಭೇಟಿ ನೀಡಿ, ರೈತರು, ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು,’ದೇಶದಲ್ಲಿ ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಾಧ್ಯತೆಗಳಿವೆ. ತೋಟಗಾರಿಕೆ ಬೆಳೆಗಳ ಉತ್ಪಾದನೆ ಪ್ರಮಾಣ ಹೆಚ್ಚಿದರೆ, ದೇಶೀಯ ಮಾರುಕಟ್ಟೆಯಲ್ಲದೇ, ಜಾಗತಿಕ ಮಾರುಕಟ್ಟೆಯಲ್ಲೂ ನಮ್ಮ ಅಸ್ತಿತ್ವವನ್ನು ಸ್ಥಾಪಿಸಬಹುದು’ ಎಂದು ಅವರು ಹೇಳಿದರು.