‘ಅತಿವೃಷ್ಟಿಗೆ ತುತ್ತಾದವರಿಗೆ ಎಲ್ಲ ಪಕ್ಷಗಳ ಮುಖಂಡರು ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇವೆ. ಇದು ರಾಜಕೀಯ ಮಾಡುವ ಸಮಯ
ವಲ್ಲ’ ಎಂದೂ ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇಂದ್ರದಿಂದ ಹಣ ಬಿಡುಗಡೆ ಆಗಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಕಣ್ಣಾರೆ ವಸ್ತು ಸ್ಥಿತಿ ಕಂಡಿದ್ದಾರೆ. ಆದರೆ ಈವರೆಗೂ ಪರಿಹಾರ ಪ್ರಕಟಿಸಿಲ್ಲ. ಕೇಂದ್ರದಿಂದ ಭರವಸೆಯೂ ಸಿಕ್ಕಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.