ಬೆಂಗಳೂರು: ನೀರಾವರಿ ಇಲಾಖೆಯ ನಿವೃತ್ತ ಅಧಿಕಾರಿ ಟಿ.ಎಲ್. ಚಂದ್ರಶೇಖರ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಕೇಂದ್ರ ಸರ್ಕಾರ ನೀಡಿದ್ದ ‘ಶಿಲ್ಪಗುರು’ ಪದಕ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ.
‘ಚುಂಚನಘಟ್ಟ ಮುಖ್ಯರಸ್ತೆಯ ಸುಪ್ರಜಾ ನಗರದಲ್ಲಿ ವಾಸವಿರುವ ಚಂದ್ರಶೇಖರ್ ಅವರು ಕಳ್ಳತನ ಬಗ್ಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಕೋಣನಕುಂಟೆ ಠಾಣೆ ಪೊಲೀಸ್ ಮೂಲಗಳು ಹೇಳಿವೆ.