<p><strong>ನವದೆಹಲಿ:</strong> ರಾಜ್ಯ ರಾಜಧಾನಿ ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ನೂತನ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಜತೆಗೆ, ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಶಾಶ್ವತ ಕಚೇರಿಯನ್ನು ಆರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ತಿಳಿಸಿದ್ದಾರೆ.</p>.<p>ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜೆ.ಹಳ್ಳಿಗಳಲ್ಲಿ ಇತ್ತೀಚೆಗೆ ಗಲಭೆ ನಡದಿರುವ ಹಾಗೂ ಈ ಹಿಂದೆ ರಾಜ್ಯದಲ್ಲಿ ಅನೇಕ ಉಗ್ರ ಸಂಘಟನೆಗಳ ದಾಳಿಯ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗಾಗಿ ಈ ಕಚೇರಿ ಆರಂಭಿಸುವಂತೆ ಸಲ್ಲಿಸಿದ ಮನವಿಗೆ ಕೇಂದ್ರ ಸ್ಪಂದಿಸಿದೆ ಎಂದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಭೇಟಿ ಮಾಡಿ ಈ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಸಚಿವರು ಎನ್ಐಎ ಕಚೇರಿ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/minister-jcmadhuswamy-said-no-police-failure-in-dj-halli-riot-765791.html" target="_blank">ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿಲ್ಲ: ಜೆ.ಸಿ.ಮಾಧುಸ್ವಾಮಿ</a></p>.<p>ಅನೇಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉಗ್ರರನ್ನು, ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಎನ್ಐಎ ಶಾಶ್ವತ ಕಚೇರಿಯ ಅಗತ್ಯ ಇದೆ ಎಂಬುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಗಳೂರಿನ ರೋಸ್ ಈರುಳ್ಳಿ ರಫ್ತನ್ನು ರದ್ದುಗೊಳಿಸದಂತೆ ಕೋರಿ ಕೇಂದ್ರದ ವಾಣಿಜ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ವಸತಿ ಯೋಜನೆ ಅಡಿ ರಾಜ್ಯದ ಬಡಜನತೆಗೆ ಮತ್ತಷ್ಟು ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ವಿ.ಸೋಮಣ್ಣ ಜೊತೆ ತೆರಳಿ ಕೇಂದ್ರಕ್ಕೆ ಕೋರಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸುವಂತೆಯೂ ಮನವಿ ಸಲ್ಲಿಸಲಾಗಿದ್ದು ಕೇಂದ್ರವು ಈಡೇರಿಸುವ ಭರವಸೆ ನೀಡಿದೆ ಎಂದು ಅವರು ತಿಳಿಸಿದರು.</p>.<p>ಯುವ ಮೋರ್ಚಾ ಅಧ್ಯಕ್ಷ ಸ್ಥಾನದ ನಿರೀಕ್ಷೆ ಇರಲಿಲ್ಲ. ಪ್ರಧಾನಿ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯುವಕರಿಗೆ ಸ್ಥಾನಮಾನದೊಂದಿಗೆ ಅಧಿಕಾರ ನೀಡಿರುವುದು ಅಭಿನಂದನೀಯ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯ ರಾಜಧಾನಿ ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ನೂತನ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಜತೆಗೆ, ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಶಾಶ್ವತ ಕಚೇರಿಯನ್ನು ಆರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ತಿಳಿಸಿದ್ದಾರೆ.</p>.<p>ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜೆ.ಹಳ್ಳಿಗಳಲ್ಲಿ ಇತ್ತೀಚೆಗೆ ಗಲಭೆ ನಡದಿರುವ ಹಾಗೂ ಈ ಹಿಂದೆ ರಾಜ್ಯದಲ್ಲಿ ಅನೇಕ ಉಗ್ರ ಸಂಘಟನೆಗಳ ದಾಳಿಯ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗಾಗಿ ಈ ಕಚೇರಿ ಆರಂಭಿಸುವಂತೆ ಸಲ್ಲಿಸಿದ ಮನವಿಗೆ ಕೇಂದ್ರ ಸ್ಪಂದಿಸಿದೆ ಎಂದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಭೇಟಿ ಮಾಡಿ ಈ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಸಚಿವರು ಎನ್ಐಎ ಕಚೇರಿ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/minister-jcmadhuswamy-said-no-police-failure-in-dj-halli-riot-765791.html" target="_blank">ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿಲ್ಲ: ಜೆ.ಸಿ.ಮಾಧುಸ್ವಾಮಿ</a></p>.<p>ಅನೇಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉಗ್ರರನ್ನು, ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಎನ್ಐಎ ಶಾಶ್ವತ ಕಚೇರಿಯ ಅಗತ್ಯ ಇದೆ ಎಂಬುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಗಳೂರಿನ ರೋಸ್ ಈರುಳ್ಳಿ ರಫ್ತನ್ನು ರದ್ದುಗೊಳಿಸದಂತೆ ಕೋರಿ ಕೇಂದ್ರದ ವಾಣಿಜ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ವಸತಿ ಯೋಜನೆ ಅಡಿ ರಾಜ್ಯದ ಬಡಜನತೆಗೆ ಮತ್ತಷ್ಟು ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ವಿ.ಸೋಮಣ್ಣ ಜೊತೆ ತೆರಳಿ ಕೇಂದ್ರಕ್ಕೆ ಕೋರಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸುವಂತೆಯೂ ಮನವಿ ಸಲ್ಲಿಸಲಾಗಿದ್ದು ಕೇಂದ್ರವು ಈಡೇರಿಸುವ ಭರವಸೆ ನೀಡಿದೆ ಎಂದು ಅವರು ತಿಳಿಸಿದರು.</p>.<p>ಯುವ ಮೋರ್ಚಾ ಅಧ್ಯಕ್ಷ ಸ್ಥಾನದ ನಿರೀಕ್ಷೆ ಇರಲಿಲ್ಲ. ಪ್ರಧಾನಿ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯುವಕರಿಗೆ ಸ್ಥಾನಮಾನದೊಂದಿಗೆ ಅಧಿಕಾರ ನೀಡಿರುವುದು ಅಭಿನಂದನೀಯ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>